ಹೈದರಬಾದ್: ‘ಪುಷ್ಪ-2ʼ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದತಿಗೆ ನಟ ಅಲ್ಲು ಅರ್ಜುನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಲ್ಲು ಅರ್ಜುನ್ ಅವರ ʼಪುಷ್ಪ-2 ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ಕಾಣುತ್ತಿದೆ. ರಿಲೀಸ್ ಆದ ವಾರದೊಳಗೆಯೇ ಸಿನಿಮಾ 1000 ಕೋಟಿ ಗಳಿಕೆಯತ್ತ ಮುನ್ನುಗ್ಗುತ್ತಿದೆ. ಪ್ಯಾನ್ ಇಂಡಿಯಾದಲ್ಲಿ ಹೊಸ ದಾಖಲೆಗೆ ಮುಂದಾಗುತ್ತಿರುವಾಗಲೇ ʼಪುಷ್ಪ-2ʼ ಚಿತ್ರ ತಂಡದ ಮೇಲಾಗಿರುವ ಎಫ್ಐಆರ್ ಅಲ್ಲು ಅರ್ಜುನ್ ಅವರಿಗೆ ತಲೆ ನೋವಿನ ಸಂಗತಿಯಾಗಿ ಪರಿಣಮಿಸಿದೆ.
ಈ ಘಟನೆ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಸೇರಿ, ಚಿತ್ರತಂಡ ಹಾಗೂ ಥಿಯೇಟರ್ ಮಾಲೀಕ, ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇತ್ತೀಚೆಗೆ ಸಂಧ್ಯಾ ಥಿಯೇಟರ್ ಮಾಲೀಕ ಎಂ.ಸಂದೀಪ್, ವ್ಯವಸ್ಥಾಪಕ ಎಂ. ನಾಗರಾಜು ಹಾಗೂ ಭದ್ರತಾ ಮುಖ್ಯಸ್ಥ ಗಂಧಕಂ ವಿಜಯ್ ಚಂದರ್ ಅವರನ್ನು ಬಂಧಿಸಲಾಗಿತ್ತು.
ಅಲ್ಲು ಅರ್ಜುನ್ ಅವೆ ಮೇಲೂ ಕೇಸ್ ದಾಖಲಾಗಿದ್ದು, ಇದೀಗ ಅಲ್ಲು ಅರ್ಜುನ್ ಈ ಸಂಬಂಧ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತನ್ನ ಮೇಲೆ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ನಟ ತೆಲಂಗಾಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ನ್ಯಾಯಾಲಯ ಶೀಘ್ರದಲ್ಲೇ ಅರ್ಜಿಯನ್ನು ವಿಚಾರಿಸಲಿದೆ ಎಂದು ವರದಿಯಾಗಿದೆ.
ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದರು.
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…