ಹಾಸನ: ಪೂಜಾರಿಯೋರ್ವ ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪಾರ್ವತಿ (47) ಎಂದು ಗುರುತಿಸಲಾಗಿದೆ.
ಪಾರ್ವತಿ ಎಂಬವರು ತಲೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಹೋಗಿಯೂ ಗುಣಮುಖರಾಗದ ಹಿನ್ನೆಲೆ ಗ್ರಾಮದ ಪಿರಿಯಾಪಟ್ಟಣದ ದೇವರ ಪೂಜಾರಿ ಮಧು ಎಂಬವರ ಬಳಿ ಕರೆದುಕೊಂಡು ಹೋಗಿದ್ದು, ತಲೆ ನೋವನ್ನು ಬೆತ್ತದಿಂದ ಸರಿಪಡಿಸುವುದಾಗಿ ಹೇಳಿದ ಪೂಜಾರಿ ಮಹಿಳೆಗೆ ಬೆತ್ತದಿಂದ ಹೊಡೆದಿದ್ದು, ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಪಾರ್ವತಿಯವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ತಲೆಗೆ ಹೊಡೆದ ಒಂದೇ ಏಟಿಗೆ ಪಾರ್ವತಿಯವರು ತೀವ್ರ ಅಸ್ವಸ್ಥಗೊಂಡಿದ್ದು, ಈ ವೇಳೆ ನಿಂಬೆ ರಸ ಕುಡಿಸಿ ಖಾಯಿಲೆ ಗುಣವಾಗಿದೆ ಎಂದು ಹೇಳಿ ಕುಟುಂಬಸ್ಥರನ್ನು ಪೂಜಾರಿ ಕಳುಹಿಸಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ನಂತರ ಪೂಜಾರಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…