ಹಾಸನ: ಪೂಜಾರಿಯೋರ್ವ ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪಾರ್ವತಿ (47) ಎಂದು ಗುರುತಿಸಲಾಗಿದೆ.
ಪಾರ್ವತಿ ಎಂಬವರು ತಲೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಹೋಗಿಯೂ ಗುಣಮುಖರಾಗದ ಹಿನ್ನೆಲೆ ಗ್ರಾಮದ ಪಿರಿಯಾಪಟ್ಟಣದ ದೇವರ ಪೂಜಾರಿ ಮಧು ಎಂಬವರ ಬಳಿ ಕರೆದುಕೊಂಡು ಹೋಗಿದ್ದು, ತಲೆ ನೋವನ್ನು ಬೆತ್ತದಿಂದ ಸರಿಪಡಿಸುವುದಾಗಿ ಹೇಳಿದ ಪೂಜಾರಿ ಮಹಿಳೆಗೆ ಬೆತ್ತದಿಂದ ಹೊಡೆದಿದ್ದು, ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಪಾರ್ವತಿಯವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ತಲೆಗೆ ಹೊಡೆದ ಒಂದೇ ಏಟಿಗೆ ಪಾರ್ವತಿಯವರು ತೀವ್ರ ಅಸ್ವಸ್ಥಗೊಂಡಿದ್ದು, ಈ ವೇಳೆ ನಿಂಬೆ ರಸ ಕುಡಿಸಿ ಖಾಯಿಲೆ ಗುಣವಾಗಿದೆ ಎಂದು ಹೇಳಿ ಕುಟುಂಬಸ್ಥರನ್ನು ಪೂಜಾರಿ ಕಳುಹಿಸಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ನಂತರ ಪೂಜಾರಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…