ನಮ್ಮ ಧರ್ಮಾಚರಣೆಯಲ್ಲಿ ನಾವು ಪ್ರಥಮ ಆದ್ಯತೆ ನೀಡುವುದು ಭಗವಂತನಿಗೆ, ಆದ್ದರಿಂದ ಭಗವಂತನನ್ನು ಒಲಿಸಿಕೊಳ್ಳಲು ಹಲವು ರೀತಿಯ ಪೂಜೆಗಳು, ಹೋಮಗಳು, ಪ್ರತಿ ದೇವರಿಗೂ ಹಬ್ಬಗಳು ಹೀಗೆ ಹತ್ತು ಹಲವು ಕಾರ್ಯಗಳನ್ನು ಮಾಡುತ್ತೇವೆ, ಹಾಗೂ ಈ ಕಾರ್ಯಗಳಿಗೆ ಅಥವಾ ಪೂಜೆಗಳಿಗೆ ನಾವು ಪವಿತ್ರವೆಂದು ಭಾವಿಸುವುದು ಹಾಗೂ ಬಳಸುವುದು ತೆಂಗಿನಕಾಯಿ.
ನಾವು ಮುಖ್ಯವಾಗಿ ದೇವರಿಗೆ ನೀಡುವ ನೇವೇದ್ಯ, ಅದರಲ್ಲೂ ಒಂದು ತೆಂಗಿನಕಾಯಿ ಹಿಂದೆ ಹಲವು ಸಾಂಪ್ರದಾಯಿಕ ಅರ್ಥಗಳಿವೆ ಇದರ ಬಗ್ಗೆಯೂ ಇಂದು ನಾವು ಸಂಪೂರ್ಣವಾಗಿ ತೆಗೆದುಕೊಳ್ಳೋಣ.
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ.
ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ.
ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ ಎಲ್ಲ ಬಾರಿ ಇದು ಅಶುಭ ಸಂಕೇತವಲ್ಲ. ತೆಂಗಿನಕಾಯಿಯನ್ನು ತಾಯಿ ಲಕ್ಷ್ಮಿಗೆ ಹೋಲಿಕೆ ಮಾಡಲಾಗುತ್ತದೆ. ಲಕ್ಷ್ಮಿ ಆರಾಧನೆ ವೇಳೆ ತೆಂಗಿನಕಾಯಿ ಒಡೆಯಲಾಗುತ್ತದೆ. ಒಡೆದ ತೆಂಗಿನಕಾಯಿ ಹಾಳಾಗಿದ್ದರೆ ಇದನ್ನು ಶುಭ ಸಂಕೇತ ಎನ್ನಲಾಗುತ್ತದೆ.
ಒಡೆದ ತೆಂಗಿನಕಾಯಿ ಹಾಳಾಗಿದ್ದು, ಅದನ್ನು ಶುಭವೆನ್ನಲು ವಿಶೇಷ ಕಾರಣವಿದೆ. ದೇವರಿಗೆ ನೀವು ಅರ್ಪಣೆ ಮಾಡಿದ ತೆಂಗಿನಕಾಯಿಯನ್ನು ದೇವರು ಸ್ವೀಕರಿಸಿದ್ದಾನೆ. ನಿಮ್ಮ ಪೂಜೆಗೆ ತೃಪ್ತಿಗೊಂಡಿದ್ದಾನೆ. ಶೀಘ್ರವೇ ನಿಮ್ಮೆಲ್ಲ ಆಸೆ ಈಡೇರಲಿದೆ ಎಂದರ್ಥ. ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಮಾಡಿ ತೆಂಗಿನಕಾಯಿ ಒಡೆದಾಗ ತೆಂಗಿನಕಾಯಿ ಹಾಳಾಗಿದ್ದರೆ ನಿಮ್ಮ ಪ್ರಾರ್ಥನೆ ದೇವರಿಗೆ ಕೇಳಿದೆ ಎಂದು ಅರ್ಥೈಸಿಕೊಳ್ಳಿ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…