ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ ಮಾನನಷ್ಟ ಸಂಕಷ್ಟ ಎದುರಾಗಿದೆ. ಈಕೆ ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.
ಇದಷ್ಟೇ ಅಲ್ಲದೇ, ಮೊನ್ನೆಯಷ್ಟೇ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.
ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…