ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ ಮಾನನಷ್ಟ ಸಂಕಷ್ಟ ಎದುರಾಗಿದೆ. ಈಕೆ ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.
ಇದಷ್ಟೇ ಅಲ್ಲದೇ, ಮೊನ್ನೆಯಷ್ಟೇ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.
ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…