Featured

ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ  ಪೀಠಾರೋಹಣ ವರ್ಧಂತಿ ಸಂಸ್ಮರಣೆ , ವಿಶ್ವೇಶತೀರ್ಥರಿಂದ ಆಧ್ಯಾತ್ಮಿಕ ಜ್ಞಾನ ಪ್ರಸರಣ -Vishwanews24

ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ  ಪೀಠಾರೋಹಣ ವರ್ಧಂತಿ ಸಂಸ್ಮರಣೆ , ವಿಶ್ವೇಶತೀರ್ಥರಿಂದ ಆಧ್ಯಾತ್ಮಿಕ ಜ್ಞಾನ ಪ್ರಸರಣ -Vishwanews24

ಬೆಂಗಳೂರು:  ಉಡುಪಿಯ ಪೇಜಾವರ ಮಠವು ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆಯೋಜಿಸಿದ ವಿಶ್ವೇಶತೀರ್ಥ ಶ್ರೀಪಾದರ 82ನೇ ದ್ವೈತ ವೇದಾಂತ ಸಿಂಹಾಸನ ಪೀಠಾರೋಹಣ ವರ್ಧಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

‘ಆಧ್ಯಾತ್ಮಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ವಿಶ್ವೇಶತೀರ್ಥರು, ತಮ್ಮ ಪರಿಶುದ್ಧ ಚಾರಿತ್ರ್ಯ, ಅಪಾರ ವಿದ್ವತ್ತಿನಿಂದ ಕೋಟ್ಯಾಂತರ ಭಕ್ತರಿಗೆ ಮಾರ್ಗದರ್ಶನ ಮಾಡಿದ್ದರು. 5 ಬಾರಿ ಉಡುಪಿಯ ಕೃಷ್ಣನ ಪರ್ಯಾಯ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿ, ದಾಖಲೆ ನಿರ್ಮಿಸಿದ್ದರು. ದೇಶದಾದ್ಯಂತ 80 ಕ್ಕೂ ಹೆಚ್ಚು ಶಾಲಾ–ಕಾಲೇಜುಗಳು, ಅನಾಥಾಶ್ರಮ, ವೇದಪಾಠಶಾಲೆಗಳನ್ನು ನಿರ್ಮಿಸುವ ಮೂಲಕ ಸಮಾಜಸೇವೆಯಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇಡೀ ದೇಶದ ಉದ್ದಗಲದಲ್ಲಿ ಅಮಿತವಾದ ಸಂಚಾರ, ಸಕ್ರಿಯ ಚಟುವಟಿಕೆಗಳಿಂದಾಗಿ ಅಪಾರ ಜನಮನ್ನಣೆ ಹೊಂದಿದ್ದರು’ ಎಂದು ಸ್ಮರಿಸಿಕೊಂಡರು.

ಆಶೀರ್ವಚನ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು , ‘ವಿಶ್ವೇಶ ತೀರ್ಥರು ಸಮಾಜಸೇವೆಯ ಮೂಲಕವೇ ತಮ್ಮನ್ನು ಕೃಷ್ಣನ ಸೇವೆಯಲ್ಲಿ ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದರು. ರಾಮಜನ್ಮ ಭೂಮಿ,ರಾಮಸೇತು ವಿವಾದ, ಗೋಹತ್ಯೆ ನಿಷೇಧ ಮುಂತಾದ ಸಂದರ್ಭದಲ್ಲಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಭಗವಂತನ ಸರ್ಕಾರದಲ್ಲಿ ದೀನದಲಿತರಿಗೆ ಸಲ್ಲಿಸುವ ಸೇವೆಯೇ ತೆರಿಗೆ ಎಂದು ಪರಿಗಣಿಸಲ್ಪಡುತ್ತದೆ. ಅದರ ಮೇಲೆ ಅವರಿಗೆ ನಂಬಿಕೆಯಿತ್ತು’ ಎಂದರು.

‘ಇಳಿ ವಯಸ್ಸಿನಲ್ಲಿಯೂ ದೇಶದಾದ್ಯಂತ ಸಂಚಾರ ಕೈಗೊಳ್ಳುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥರು, ಮೇಲುಕೀಳು ಎಂಬ ಭಾವವಿಲ್ಲದೆ ಪ್ರತಿಯೊಬ್ಬರಿಗೂ ಆಧ್ಯಾತ್ಮಿಕ ಜ್ಞಾನವನ್ನು ಪಸರಿಸಲು ಶ್ರಮಿಸಿದರು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ವಿದ್ವಾನ್ ಪ್ರಭಂಜನಾಚಾರ್ಯ, ಉಡುಪಿ ಶಾಸಕ ರಘುಪತಿಭಟ್, ಬಸವನಗುಡಿ ಶಾಸಕ ರವಿಸುಬ್ರಹ್ಮಣ್ಯ ಇದ್ದರು.

Vishwa News 24

Recent Posts

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…

2 hours ago

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

2 hours ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

3 hours ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

3 hours ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

3 hours ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

4 hours ago