Featured

ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ  ಪೀಠಾರೋಹಣ ವರ್ಧಂತಿ ಸಂಸ್ಮರಣೆ , ವಿಶ್ವೇಶತೀರ್ಥರಿಂದ ಆಧ್ಯಾತ್ಮಿಕ ಜ್ಞಾನ ಪ್ರಸರಣ -Vishwanews24

ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ  ಪೀಠಾರೋಹಣ ವರ್ಧಂತಿ ಸಂಸ್ಮರಣೆ , ವಿಶ್ವೇಶತೀರ್ಥರಿಂದ ಆಧ್ಯಾತ್ಮಿಕ ಜ್ಞಾನ ಪ್ರಸರಣ -Vishwanews24

ಬೆಂಗಳೂರು:  ಉಡುಪಿಯ ಪೇಜಾವರ ಮಠವು ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆಯೋಜಿಸಿದ ವಿಶ್ವೇಶತೀರ್ಥ ಶ್ರೀಪಾದರ 82ನೇ ದ್ವೈತ ವೇದಾಂತ ಸಿಂಹಾಸನ ಪೀಠಾರೋಹಣ ವರ್ಧಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

‘ಆಧ್ಯಾತ್ಮಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ವಿಶ್ವೇಶತೀರ್ಥರು, ತಮ್ಮ ಪರಿಶುದ್ಧ ಚಾರಿತ್ರ್ಯ, ಅಪಾರ ವಿದ್ವತ್ತಿನಿಂದ ಕೋಟ್ಯಾಂತರ ಭಕ್ತರಿಗೆ ಮಾರ್ಗದರ್ಶನ ಮಾಡಿದ್ದರು. 5 ಬಾರಿ ಉಡುಪಿಯ ಕೃಷ್ಣನ ಪರ್ಯಾಯ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿ, ದಾಖಲೆ ನಿರ್ಮಿಸಿದ್ದರು. ದೇಶದಾದ್ಯಂತ 80 ಕ್ಕೂ ಹೆಚ್ಚು ಶಾಲಾ–ಕಾಲೇಜುಗಳು, ಅನಾಥಾಶ್ರಮ, ವೇದಪಾಠಶಾಲೆಗಳನ್ನು ನಿರ್ಮಿಸುವ ಮೂಲಕ ಸಮಾಜಸೇವೆಯಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇಡೀ ದೇಶದ ಉದ್ದಗಲದಲ್ಲಿ ಅಮಿತವಾದ ಸಂಚಾರ, ಸಕ್ರಿಯ ಚಟುವಟಿಕೆಗಳಿಂದಾಗಿ ಅಪಾರ ಜನಮನ್ನಣೆ ಹೊಂದಿದ್ದರು’ ಎಂದು ಸ್ಮರಿಸಿಕೊಂಡರು.

ಆಶೀರ್ವಚನ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು , ‘ವಿಶ್ವೇಶ ತೀರ್ಥರು ಸಮಾಜಸೇವೆಯ ಮೂಲಕವೇ ತಮ್ಮನ್ನು ಕೃಷ್ಣನ ಸೇವೆಯಲ್ಲಿ ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದರು. ರಾಮಜನ್ಮ ಭೂಮಿ,ರಾಮಸೇತು ವಿವಾದ, ಗೋಹತ್ಯೆ ನಿಷೇಧ ಮುಂತಾದ ಸಂದರ್ಭದಲ್ಲಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಭಗವಂತನ ಸರ್ಕಾರದಲ್ಲಿ ದೀನದಲಿತರಿಗೆ ಸಲ್ಲಿಸುವ ಸೇವೆಯೇ ತೆರಿಗೆ ಎಂದು ಪರಿಗಣಿಸಲ್ಪಡುತ್ತದೆ. ಅದರ ಮೇಲೆ ಅವರಿಗೆ ನಂಬಿಕೆಯಿತ್ತು’ ಎಂದರು.

‘ಇಳಿ ವಯಸ್ಸಿನಲ್ಲಿಯೂ ದೇಶದಾದ್ಯಂತ ಸಂಚಾರ ಕೈಗೊಳ್ಳುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥರು, ಮೇಲುಕೀಳು ಎಂಬ ಭಾವವಿಲ್ಲದೆ ಪ್ರತಿಯೊಬ್ಬರಿಗೂ ಆಧ್ಯಾತ್ಮಿಕ ಜ್ಞಾನವನ್ನು ಪಸರಿಸಲು ಶ್ರಮಿಸಿದರು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ವಿದ್ವಾನ್ ಪ್ರಭಂಜನಾಚಾರ್ಯ, ಉಡುಪಿ ಶಾಸಕ ರಘುಪತಿಭಟ್, ಬಸವನಗುಡಿ ಶಾಸಕ ರವಿಸುಬ್ರಹ್ಮಣ್ಯ ಇದ್ದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

7 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

11 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

11 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

11 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

12 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

12 hours ago