Featured

ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ  ಪೀಠಾರೋಹಣ ವರ್ಧಂತಿ ಸಂಸ್ಮರಣೆ , ವಿಶ್ವೇಶತೀರ್ಥರಿಂದ ಆಧ್ಯಾತ್ಮಿಕ ಜ್ಞಾನ ಪ್ರಸರಣ -Vishwanews24

ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ  ಪೀಠಾರೋಹಣ ವರ್ಧಂತಿ ಸಂಸ್ಮರಣೆ , ವಿಶ್ವೇಶತೀರ್ಥರಿಂದ ಆಧ್ಯಾತ್ಮಿಕ ಜ್ಞಾನ ಪ್ರಸರಣ -Vishwanews24

ಬೆಂಗಳೂರು:  ಉಡುಪಿಯ ಪೇಜಾವರ ಮಠವು ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆಯೋಜಿಸಿದ ವಿಶ್ವೇಶತೀರ್ಥ ಶ್ರೀಪಾದರ 82ನೇ ದ್ವೈತ ವೇದಾಂತ ಸಿಂಹಾಸನ ಪೀಠಾರೋಹಣ ವರ್ಧಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

‘ಆಧ್ಯಾತ್ಮಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ವಿಶ್ವೇಶತೀರ್ಥರು, ತಮ್ಮ ಪರಿಶುದ್ಧ ಚಾರಿತ್ರ್ಯ, ಅಪಾರ ವಿದ್ವತ್ತಿನಿಂದ ಕೋಟ್ಯಾಂತರ ಭಕ್ತರಿಗೆ ಮಾರ್ಗದರ್ಶನ ಮಾಡಿದ್ದರು. 5 ಬಾರಿ ಉಡುಪಿಯ ಕೃಷ್ಣನ ಪರ್ಯಾಯ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿ, ದಾಖಲೆ ನಿರ್ಮಿಸಿದ್ದರು. ದೇಶದಾದ್ಯಂತ 80 ಕ್ಕೂ ಹೆಚ್ಚು ಶಾಲಾ–ಕಾಲೇಜುಗಳು, ಅನಾಥಾಶ್ರಮ, ವೇದಪಾಠಶಾಲೆಗಳನ್ನು ನಿರ್ಮಿಸುವ ಮೂಲಕ ಸಮಾಜಸೇವೆಯಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇಡೀ ದೇಶದ ಉದ್ದಗಲದಲ್ಲಿ ಅಮಿತವಾದ ಸಂಚಾರ, ಸಕ್ರಿಯ ಚಟುವಟಿಕೆಗಳಿಂದಾಗಿ ಅಪಾರ ಜನಮನ್ನಣೆ ಹೊಂದಿದ್ದರು’ ಎಂದು ಸ್ಮರಿಸಿಕೊಂಡರು.

ಆಶೀರ್ವಚನ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು , ‘ವಿಶ್ವೇಶ ತೀರ್ಥರು ಸಮಾಜಸೇವೆಯ ಮೂಲಕವೇ ತಮ್ಮನ್ನು ಕೃಷ್ಣನ ಸೇವೆಯಲ್ಲಿ ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದರು. ರಾಮಜನ್ಮ ಭೂಮಿ,ರಾಮಸೇತು ವಿವಾದ, ಗೋಹತ್ಯೆ ನಿಷೇಧ ಮುಂತಾದ ಸಂದರ್ಭದಲ್ಲಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಭಗವಂತನ ಸರ್ಕಾರದಲ್ಲಿ ದೀನದಲಿತರಿಗೆ ಸಲ್ಲಿಸುವ ಸೇವೆಯೇ ತೆರಿಗೆ ಎಂದು ಪರಿಗಣಿಸಲ್ಪಡುತ್ತದೆ. ಅದರ ಮೇಲೆ ಅವರಿಗೆ ನಂಬಿಕೆಯಿತ್ತು’ ಎಂದರು.

‘ಇಳಿ ವಯಸ್ಸಿನಲ್ಲಿಯೂ ದೇಶದಾದ್ಯಂತ ಸಂಚಾರ ಕೈಗೊಳ್ಳುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥರು, ಮೇಲುಕೀಳು ಎಂಬ ಭಾವವಿಲ್ಲದೆ ಪ್ರತಿಯೊಬ್ಬರಿಗೂ ಆಧ್ಯಾತ್ಮಿಕ ಜ್ಞಾನವನ್ನು ಪಸರಿಸಲು ಶ್ರಮಿಸಿದರು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ವಿದ್ವಾನ್ ಪ್ರಭಂಜನಾಚಾರ್ಯ, ಉಡುಪಿ ಶಾಸಕ ರಘುಪತಿಭಟ್, ಬಸವನಗುಡಿ ಶಾಸಕ ರವಿಸುಬ್ರಹ್ಮಣ್ಯ ಇದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

48 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 hour ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago