ಮಂಗಳೂರು: ಇಂದು ನಾವು ಹಿರಿಯರು ಹಾಕಿಕೊಟ್ಟ ಹಾದಿಯನ್ನು ಮರೆಯುತ್ತಿದ್ದೇವೆ. ಪೂರ್ವಿಕರು ನಮಗಾಗಿ ಮಾಡಿದ ತ್ಯಾಗ, ಬಲಿದಾನಗಳನ್ನು ನನಪಿಸಿಕೊಂಡು ನಮ್ಮನ್ನು ತಿದ್ದಿಕೊಂಡು ಬಾಳಬೇಕಾಗಿದೆ ಎಂದು ಉದ್ಯಮಿ, ಸಮಾಜ ಸೇವಕ ಸುರೇಶ್ ಶೆಟ್ಟಿ ಗುರ್ಮೆ ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಂಗ ಚಾವಡಿ ಮಂಗಳೂರು ಆಶ್ರಯದಲ್ಲಿ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಕಾಡೆಮಿಯ ತುಳುಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುರೇಶ್ ಶೆಟ್ಟಿ ಗುರ್ಮೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮನುಷ್ಯ ಬೆಳೆಯ ಬೇಕಾದರೆ ಪ್ರೋತ್ಸಾಹ ಅಗತ್ಯ. ಸಾಧಕರಿಗೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕೆಂದು ಹೇಳಿದರು.ಇದೇ ವೇಳೆ ಸಂಗೀತ ನಿರ್ದೇಶಕ ಮುರಳೀಧರ್ ಕಾಮತ್ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ರಂಗ ಚಾವಡಿ ಸಾಹಿತ್ಯಕ-ಸಾಂಸ್ಕೃತಿಕ ಸಂಘಟನೆಯ ಆಶ್ರಯದಲ್ಲಿ ಉರ್ವಾಸೂರ್ ತುಳುಭವನದ ಸಿರಿ ಚಾವಡಿಯಲ್ಲಿ ನಡೆದ ರಂಗಚಾವಡಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ತುಳುನಾಡಿಗೆ ತನ್ನದೆ ಆದ ಪರಂಪರೆಯಿದ. ಇಲ್ಲಿ ಒಂದೇ ತಾಯಿಯ ಮಕ್ಕಳಂತೆ ಜಾತಿ, ಮತ, ಧರ್ಮಭೇದವಿಲ್ಲದ ಬಾಳುತ್ತಿದ್ದೇವೆ. ಆದರೆ ಇಂದಿನ ಕೆಲ ವಿಚಾರಗಳು ನಮ್ಮ ಸಮಾಜದ ಒಗ್ಗಟ್ಟು ಸಂಸ್ಕೃತಿ, ಸಂಸ್ಕಾರವನ್ನು ಹಾಳು ಮಾಡುತ್ತಿದ್ದು ಅದಕ್ಕೆ ಅವಕಾಶ ನೀಡಬಾರದೆಂದರು. ಸಮಾರಂಭದಲ್ಲಿ 2020ರ ಸಾಲಿನ ರಂಗಚಾವಡಿ ಗೌರವ ಪ್ರಶಸ್ತಿಯನ್ನು ಸಂಗೀತ ನಿರ್ದೇಶಕ ಮುರಳೀಧರ ಕಾಮತ್ ಕೊಂಚಾಡಿ ಅವರಿಗೆ ಪುದಾನ ಮಾಡಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಯಾದವ್ ಕೋಟ್ಯಾನ್ ಪರ್ಮುದೆ, ರಮಾನಾಥ ಶೆಟ್ಟಿ ಬೈಕಂಪಾಡಿ, ಸುರತ್ಕಲ್ ಮಾತಾ ಡೆವಲಪರ್ಸ್ನ ಆಡಳಿತ ನಿರ್ದೇಶಕ ಎನ್.ಸಂತೋಷ್ ಕುಮಾರ್ ಶೆಟ್ಟಿ, ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್.ಪೂಂಜ, ರಂಗಚಾವಡಿ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಇದ್ದರು. ರಾಗಧ್ವನಿ ಬಳಗ ಮಂಗಳೂರು ಇವರಿಂದ ಸಂಗೀತ ಗಾನಗಂಗೆ ನಡೆಯಿತು. ನಿತೇಶ್ ಶೆಟ್ಟಿ ಎಕಾಲ್ ಕಾರ್ಯಕ್ರಮ ನಿರ್ವಹಿಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…