Featured

ಪೂರ್ವಿಕರು ನಮಗಾಗಿ ಮಾಡಿದ ತ್ಯಾಗ, ಬಲಿದಾನಗಳನ್ನು ನನಪಿಸಿಕೊಂಡು ನಮ್ಮನ್ನು ತಿದ್ದಿಕೊಂಡು ಬಾಳಬೇಕಾಗಿದೆ : ಸುರೇಶ್ ಶೆಟ್ಟಿ ಗುರ್ಮೆ -Vishwanews24

ಮಂಗಳೂರಿನ ತುಳುಭವನದಲ್ಲಿ ನಡೆದ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ..

ಪೂರ್ವಿಕರು ನಮಗಾಗಿ ಮಾಡಿದ ತ್ಯಾಗ, ಬಲಿದಾನಗಳನ್ನು ನನಪಿಸಿಕೊಂಡು ನಮ್ಮನ್ನು ತಿದ್ದಿಕೊಂಡು ಬಾಳಬೇಕಾಗಿದೆ : ಸುರೇಶ್ ಶೆಟ್ಟಿ ಗುರ್ಮೆ

ಮಂಗಳೂರು: ಇಂದು ನಾವು ಹಿರಿಯರು ಹಾಕಿಕೊಟ್ಟ ಹಾದಿಯನ್ನು ಮರೆಯುತ್ತಿದ್ದೇವೆ. ಪೂರ್ವಿಕರು ನಮಗಾಗಿ ಮಾಡಿದ ತ್ಯಾಗ, ಬಲಿದಾನಗಳನ್ನು ನನಪಿಸಿಕೊಂಡು ನಮ್ಮನ್ನು ತಿದ್ದಿಕೊಂಡು ಬಾಳಬೇಕಾಗಿದೆ ಎಂದು ಉದ್ಯಮಿ, ಸಮಾಜ ಸೇವಕ ಸುರೇಶ್ ಶೆಟ್ಟಿ ಗುರ್ಮೆ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಂಗ ಚಾವಡಿ ಮಂಗಳೂರು ಆಶ್ರಯದಲ್ಲಿ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಕಾಡೆಮಿಯ ತುಳುಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುರೇಶ್ ಶೆಟ್ಟಿ ಗುರ್ಮೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮನುಷ್ಯ ಬೆಳೆಯ ಬೇಕಾದರೆ ಪ್ರೋತ್ಸಾಹ ಅಗತ್ಯ. ಸಾಧಕರಿಗೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕೆಂದು ಹೇಳಿದರು.ಇದೇ ವೇಳೆ ಸಂಗೀತ ನಿರ್ದೇಶಕ ಮುರಳೀಧರ್ ಕಾಮತ್ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ರಂಗ ಚಾವಡಿ ಸಾಹಿತ್ಯಕ-ಸಾಂಸ್ಕೃತಿಕ ಸಂಘಟನೆಯ ಆಶ್ರಯದಲ್ಲಿ ಉರ್ವಾಸೂರ್ ತುಳುಭವನದ ಸಿರಿ ಚಾವಡಿಯಲ್ಲಿ ನಡೆದ ರಂಗಚಾವಡಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ತುಳುನಾಡಿಗೆ ತನ್ನದೆ ಆದ ಪರಂಪರೆಯಿದ. ಇಲ್ಲಿ ಒಂದೇ ತಾಯಿಯ ಮಕ್ಕಳಂತೆ ಜಾತಿ, ಮತ, ಧರ್ಮಭೇದವಿಲ್ಲದ ಬಾಳುತ್ತಿದ್ದೇವೆ. ಆದರೆ ಇಂದಿನ ಕೆಲ ವಿಚಾರಗಳು ನಮ್ಮ ಸಮಾಜದ ಒಗ್ಗಟ್ಟು ಸಂಸ್ಕೃತಿ, ಸಂಸ್ಕಾರವನ್ನು ಹಾಳು ಮಾಡುತ್ತಿದ್ದು ಅದಕ್ಕೆ ಅವಕಾಶ ನೀಡಬಾರದೆಂದರು. ಸಮಾರಂಭದಲ್ಲಿ 2020ರ ಸಾಲಿನ ರಂಗಚಾವಡಿ ಗೌರವ ಪ್ರಶಸ್ತಿಯನ್ನು ಸಂಗೀತ ನಿರ್ದೇಶಕ ಮುರಳೀಧರ ಕಾಮತ್ ಕೊಂಚಾಡಿ ಅವರಿಗೆ ಪುದಾನ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್‌ ವಹಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಯಾದವ್ ಕೋಟ್ಯಾನ್ ಪರ್ಮುದೆ, ರಮಾನಾಥ ಶೆಟ್ಟಿ ಬೈಕಂಪಾಡಿ, ಸುರತ್ಕಲ್ ಮಾತಾ ಡೆವಲಪರ್ಸ್‌ನ ಆಡಳಿತ ನಿರ್ದೇಶಕ ಎನ್.ಸಂತೋಷ್ ಕುಮಾರ್ ಶೆಟ್ಟಿ, ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್.ಪೂಂಜ, ರಂಗಚಾವಡಿ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಇದ್ದರು. ರಾಗಧ್ವನಿ ಬಳಗ ಮಂಗಳೂರು ಇವರಿಂದ ಸಂಗೀತ ಗಾನಗಂಗೆ ನಡೆಯಿತು. ನಿತೇಶ್ ಶೆಟ್ಟಿ ಎಕಾಲ್ ಕಾರ್ಯಕ್ರಮ ನಿರ್ವಹಿಸಿದರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

5 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

9 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

10 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

10 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

11 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

11 hours ago