Featured

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ : ಜೂ.11ರಂದು ಕಾಂಗ್ರೆಸ್ ನಿಂದ  ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ  – Vishwanews24

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ : ಜೂ.11ರಂದು ಕಾಂಗ್ರೆಸ್ ನಿಂದ  ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ  – Vishwanews24

ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ಜೂನ್ 11ರಂದು ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ. ಪೆಟ್ರೋಲ್ ಬಂಕ್‌ಗಳ ಮುಂದೆ ನಾಲ್ಕು ಗಂಟೆಗಳ (ಬೆಳಿಗ್ಗೆ 7 ರಿಂದ 11 ರವರೆಗೆ) ಧರಣಿಯನ್ನು ನಡೆಸಲಿದೆ ಎಂದು ಪಕ್ಷ ಹೇಳಿದೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 13 ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 23.72 ರೂ ಮತ್ತು ಡೀಸೆಲ್ ಬೆಲೆ 29.93 ರೂ.ಗೆ ಏರಿದೆ . ಕರೋನಾ ಸಾಂಕ್ರಾಮಿಕವು ಲಕ್ಷಾಂತರ ಜನರ ಜೀವನೋಪಾಯವನ್ನು ಹಾಳುಮಾಡಿದೆ, ಆದರೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವಲ್ಲಿ ಕೇಂದ್ರದ ಮೋದಿ ಸರ್ಕಾರವನ್ನು ಕೊರೊನಾವೂ ತಡೆಯಲಿಲ್ಲ” ಎಂದು ಕಾಂಗ್ರೆಸ್ ವಕ್ತಾರರರೂ ದೂರಿದ್ದಾರೆ.

ತೈಲ ಬೆಲೆ ಏರಿಕೆ ಕುರಿತು ಮಾತನಾಡಿರುವ ಕೇಂದ್ರ ಪೆಟ್ರೋಲಿಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ‘ಜಾಗತಿಕ ಮಟ್ಟದಲ್ಲಿ ಇತ್ತೀಚೆಗೆ ಕಚ್ಚಾತೈಲ ದರ ಹೆಚ್ಚಳವಾಗಿರುವುದೇ ಭಾರತದಲ್ಲಿ ತೈಲ ಬೆಲೆ ಏರಿಕೆಗೆ ಕಾರಣ’ ಎಂದು ಹೇಳಿದ್ದರು್’ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿರುವ ಕುರಿತು ಜಿಎಸ್‌ಟಿ ಮಂಡಳಿ ತೀರ್ಮಾನಿಸಬೇಕು. ಒಂದು ವೇಳೆ ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ದರಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿವೆ’ ಎಂದು ಸಚಿವರು ತಿಳಿಸಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago