ಉಡುಪಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಸೋಮವಾರ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, 2023 ರ ಚುನಾವಣೆಗೆ ಬಿಟ್ಟಿ ಆಮಿಷ ನೀಡಿ ಕಾಂಗ್ರೆಸ್ ಸರಕಾರಕ್ಕೆ ಬಂದಿದೆ. ಸರಕಾರ ಬಂದ ಬಳಿಕ ನೀಡಿದ ಭರವಸೆಗಳನ್ನು ನೀಡದೆ ಜನರನ್ನು ವಂಚಿಸಲಾಗಿದೆ. ಇದು ಪಕ್ಷದ ಪ್ರತಿಭಟನೆಯಲ್ಲಿ ಸಾಮಾನ್ಯ ಜನರ ಸಮಸ್ಯೆ. ಜನರ ಪರ ಪ್ರತಿಭಟನೆಗೂ ಸರಕಾರ ಅನುಮತಿ ನೀಡಿಲ್ಲ.
ಸಾಮಾನ್ಯ ಜನರ ಬಗ್ಗೆ ಸರಕಾರಕ್ಕೆ ಕಾಳಜಿ ಇಲ್ಲದಂತಾಗಿದೆ. ಹಾಲಿನ ಪ್ರೋತ್ಸಾಹ ಧನವನ್ನೂ ನೀಡುತ್ತಿಲ್ಲ. ಪ್ರತೀ ಬಾರಿಯೂ ಕೇಂದ್ರ ಸರಕಾರವನ್ನು ಟೀಕಿಸುವ ಕೆಲಸ ರಾಜ್ಯ ಸರಕಾರದಿಂದ ನಡೆಯುತ್ತಿದೆ. ಮುಂದಿನ ದಿನದಲ್ಲಿ ಜನರು ಭಿಕ್ಷೆ ಬೇಡುವ ಸ್ಥಿತಿಯೂ ದೂರವಿಲ್ಲ. ಚೊಂಬು ಕೊಟ್ಟವರು ಕಾಂಗ್ರೆಸ್ ಸರಕಾರ. ಚೊಂಬು ನೀಡಿ ಜನರು ಭಿಕ್ಷೆ ಬೇಡುವಂತೆ ಮಾಡಲಾಗಿದೆ. ಇಂಧನ ದರ ಇಳಿಕೆ ಮಾಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಇಂಧನ ಹೆಚ್ಚಳವಾದರೆ ಎಲ್ಲ ವಸ್ತುಗಳ ಬೆಲೆ ಏರಿಕೆ ಆಗಲಿದೆ. ಜನಪ್ರತಿನಿಧಿಗಳಿಗೆ ಸರಕಾರದ ಯಾವುದೇ ಫಂಡ್ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದೆ. ಜನರಿಗೆ ಅನ್ಯಾಯ ಮಾಡುತ್ತಾ ಸರಕಾರ ಕಾಲಹರಣ ಮಾಡುತ್ತಿದೆ. ಸರಕಾರ ನಡೆಸಲು ಸಾಧ್ಯವೇ ಇಲ್ಲ ಅನ್ನುವ ಸ್ಥಿತಿಯಿದೆ. ಮುಂದಿನ ದಿನಗಳಲ್ಲಿಯೂ ಈ ಬಗ್ಗೆ ಪ್ರತಿಭಟನೆ ನಡೆಸಲಾಗುವುದು ಎಂದರು.
ಪ್ರಧಾನ ಕಾರ್ಯದರ್ಶಿ ಸತೀಶ್ ಶೆಟ್ಟಿ ಮುಟ್ಲುಪ್ಪಾಡಿ ಮಾತನಾಡಿ ರಾಜ್ಯ ಸರಕಾರಿ ಗ್ಯಾರಂಟಿ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದೆ. ಸರಕಾರ ಆಡಳಿತ ಹಿಡಿದ 1 ವರ್ಷದ ಬಳಿಕ ಹಲವಾರು ಮಂದಿ ರೈತರ ಆತ್ಮಹತ್ಯೆ ಆಗಿದೆ ಎಂದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…