Featured

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ  ಬೃಹತ್ ಪ್ರತಿಭಟನೆ  – vishwanews24

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ  ಬೃಹತ್ ಪ್ರತಿಭಟನೆ

ಉಡುಪಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಸೋಮವಾರ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, 2023 ರ ಚುನಾವಣೆಗೆ ಬಿಟ್ಟಿ ಆಮಿಷ ನೀಡಿ ಕಾಂಗ್ರೆಸ್ ಸರಕಾರಕ್ಕೆ ಬಂದಿದೆ. ಸರಕಾರ ಬಂದ ಬಳಿಕ ನೀಡಿದ ಭರವಸೆಗಳನ್ನು ನೀಡದೆ ಜನರನ್ನು ವಂಚಿಸಲಾಗಿದೆ. ಇದು ಪಕ್ಷದ ಪ್ರತಿಭಟನೆಯಲ್ಲಿ ಸಾಮಾನ್ಯ ಜನರ ಸಮಸ್ಯೆ. ಜನರ ಪರ ಪ್ರತಿಭಟನೆಗೂ ಸರಕಾರ ಅನುಮತಿ ನೀಡಿಲ್ಲ.

ಸಾಮಾನ್ಯ ಜನರ ಬಗ್ಗೆ ಸರಕಾರಕ್ಕೆ ಕಾಳಜಿ ಇಲ್ಲದಂತಾಗಿದೆ. ಹಾಲಿನ ಪ್ರೋತ್ಸಾಹ ಧನವನ್ನೂ ನೀಡುತ್ತಿಲ್ಲ. ಪ್ರತೀ ಬಾರಿಯೂ ಕೇಂದ್ರ ಸರಕಾರವನ್ನು ಟೀಕಿಸುವ ಕೆಲಸ ರಾಜ್ಯ ಸರಕಾರದಿಂದ ನಡೆಯುತ್ತಿದೆ. ಮುಂದಿನ ದಿನದಲ್ಲಿ ಜನರು ಭಿಕ್ಷೆ ಬೇಡುವ ಸ್ಥಿತಿಯೂ ದೂರವಿಲ್ಲ. ಚೊಂಬು ಕೊಟ್ಟವರು ಕಾಂಗ್ರೆಸ್ ಸರಕಾರ. ಚೊಂಬು ನೀಡಿ ಜನರು ಭಿಕ್ಷೆ ಬೇಡುವಂತೆ ಮಾಡಲಾಗಿದೆ. ಇಂಧನ ದರ ಇಳಿಕೆ ಮಾಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಇಂಧನ ಹೆಚ್ಚಳವಾದರೆ ಎಲ್ಲ ವಸ್ತುಗಳ ಬೆಲೆ ಏರಿಕೆ ಆಗಲಿದೆ. ಜನಪ್ರತಿನಿಧಿಗಳಿಗೆ ಸರಕಾರದ ಯಾವುದೇ ಫಂಡ್ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದೆ. ಜನರಿಗೆ ಅನ್ಯಾಯ ಮಾಡುತ್ತಾ ಸರಕಾರ ಕಾಲಹರಣ ಮಾಡುತ್ತಿದೆ. ಸರಕಾರ ನಡೆಸಲು ಸಾಧ್ಯವೇ ಇಲ್ಲ ಅನ್ನುವ ಸ್ಥಿತಿಯಿದೆ. ಮುಂದಿನ ದಿನಗಳಲ್ಲಿಯೂ ಈ ಬಗ್ಗೆ ಪ್ರತಿಭಟನೆ ನಡೆಸಲಾಗುವುದು ಎಂದರು.

 

ಪ್ರಧಾನ ಕಾರ್ಯದರ್ಶಿ ಸತೀಶ್ ಶೆಟ್ಟಿ ಮುಟ್ಲುಪ್ಪಾಡಿ ಮಾತನಾಡಿ ರಾಜ್ಯ ಸರಕಾರಿ ಗ್ಯಾರಂಟಿ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದೆ. ಸರಕಾರ ಆಡಳಿತ ಹಿಡಿದ 1 ವರ್ಷದ ಬಳಿಕ ಹಲವಾರು ಮಂದಿ ರೈತರ ಆತ್ಮಹತ್ಯೆ ಆಗಿದೆ ಎಂದರು.

ಈ ವೇಳೆ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago