ಬೆಂಗಳೂರು: ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ, ಬ್ಯಾರಲ್ ಗೆ 130 ರೂ ಡಾಲರ್ ಇದ್ದರೂ, ಇಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದಾರೆ. ನನ್ನ ಪ್ರಕಾರ ಪೆಟ್ರೋಲ್ ಗೆ 25 ರೂ ಮಾಡಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸತತ ತೈಲ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ಸೈಕಲ್ ಸವಾರಿ ಮಾಡಿದರು.
ಇದಕ್ಕೂ ಮೊದಲು ಮಾತನಾಡಿದ ಅವರು, ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಸಬ್ಸಿಡಿ ಕೊಟ್ಟಿತ್ತು. ಈಗ ಈ ಸರ್ಕಾರ ಯಾವುದೂ ಕೊಟ್ಟಿಲ್ಲ. ಸಾಮಾನ್ಯ ಜನರ ಮೇಲೆ ದುಬಾರಿ ಬೆಲೆ ಹಾಕ್ತಿದೆ ಎಂದರು.
ರೈತರಿಗೆ ಹಾಗೂ ಕೈಗಾರಿಕೆಗಳಿಗೆ ದುಬಾರಿಯಾಗಿದೆ. ಕೋವಿಡ್ -19 ಸೋಂಕು ಇದ್ದರೂ ಕಳೆದ 10 ದಿನಗಳಿಂದ 11 ರೂ ಹೆಚ್ಚಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಬಡವರ ಮೇಲೆ ಬರೆ ಹಾಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಸರ್ಕಾರ ವಿಫಲ ಆಗಿರುವುದರ ಬಗ್ಗೆಯೂ ಪ್ರತಿಭಟನೆ ಮಾಡ್ತೀವಿ ಎಂದು ಹೇಳಿದರು.
ಸೈಕಲ್ ರಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…