ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸ್ಥಿರವಾಗಿಲ್ಲ ಎನ್ನುವ ವಿಷಯವನ್ನು ಡೈವರ್ಟ್ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಆಂತರಿಕ ಕಚ್ಚಾಟವು ಗೊತ್ತಾಗಬಾರದೆನ್ನುವ ಉದ್ದೇಶದಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಮೇಲೆ ಪ್ರತಿ ಲೀಟರ್ಗೆ 2 ರೂಪಾಯಿ ಇಳಿಕೆ ಮಾಡಿದ್ದಾರೆ. ಒಂದು ವೇಳೆ ಇವರು ಮಾಡುವುದಾದರೆ ಕನಿಷ್ಟ 10 ರೂಪಾಯಿಯನ್ನು ಇಳಿಕೆ ಮಾಡಬೇಕಾಗಿತ್ತು. ತಮ್ಮಲ್ಲಿನ ಆಂತರಿಕ ಕಿತ್ತಾಟವನ್ನು ಮರೆಮಾಚಲು ಕಿಂಗ್ಪಿನ್ ಎನ್ನುವ ಏನೇನೋ ಕಥೆ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಸಿಎಂ ಕುಮಾರಸ್ವಾಮಿಯವರಿಗೆ ತಾಕತ್ ಇದ್ದರೆ ಅವರು ಮಾಡಿರುವ ಆರೋಪಕ್ಕೆ ಸಂಬಂಧಪಟ್ಟವರನ್ನು ಶೀಘ್ರವೇ ಬಂಧಿಸಲಿ. ನಾವು ಬರೀ ರಾಜಕಾರಣ ಮಾಡಿದರೆ ನಮ್ಮ ಕ್ಷೇತ್ರದ ಜನ ನಮ್ಮನ್ನ ಕ್ಷಮಿಸುವುದಿಲ್ಲ. ಹೀಗಾಗಿ ನಾವು ಮೊದಲು ನಮ್ಮ ಕ್ಷೇತ್ರಗಳ ಅಭಿವೃದ್ಧಿಯ ಕಡೆ ಗಮನ ನೀಡುತ್ತೇವೆ ಎಂದು ಹೇಳಿದರು
ಬಿಎಸ್ವೈ ನಿವಾಸಕ್ಕೆ ಸಂಕೇಶ್ವರ್, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದು, ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಿದ್ದಾರೆ. ಅಲ್ಲದೇ ಚರ್ಚೆಯ ಬಳಿಕ ಯಡಿಯೂರಪ್ಪನವರು ಕೈ ನೋವಿನ ಚಿಕಿತ್ಸೆ ಪಡೆಯಲು ಜಿಂದಾಲ್ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…