ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸ್ಥಿರವಾಗಿಲ್ಲ ಎನ್ನುವ ವಿಷಯವನ್ನು ಡೈವರ್ಟ್ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಆಂತರಿಕ ಕಚ್ಚಾಟವು ಗೊತ್ತಾಗಬಾರದೆನ್ನುವ ಉದ್ದೇಶದಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಮೇಲೆ ಪ್ರತಿ ಲೀಟರ್ಗೆ 2 ರೂಪಾಯಿ ಇಳಿಕೆ ಮಾಡಿದ್ದಾರೆ. ಒಂದು ವೇಳೆ ಇವರು ಮಾಡುವುದಾದರೆ ಕನಿಷ್ಟ 10 ರೂಪಾಯಿಯನ್ನು ಇಳಿಕೆ ಮಾಡಬೇಕಾಗಿತ್ತು. ತಮ್ಮಲ್ಲಿನ ಆಂತರಿಕ ಕಿತ್ತಾಟವನ್ನು ಮರೆಮಾಚಲು ಕಿಂಗ್ಪಿನ್ ಎನ್ನುವ ಏನೇನೋ ಕಥೆ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಸಿಎಂ ಕುಮಾರಸ್ವಾಮಿಯವರಿಗೆ ತಾಕತ್ ಇದ್ದರೆ ಅವರು ಮಾಡಿರುವ ಆರೋಪಕ್ಕೆ ಸಂಬಂಧಪಟ್ಟವರನ್ನು ಶೀಘ್ರವೇ ಬಂಧಿಸಲಿ. ನಾವು ಬರೀ ರಾಜಕಾರಣ ಮಾಡಿದರೆ ನಮ್ಮ ಕ್ಷೇತ್ರದ ಜನ ನಮ್ಮನ್ನ ಕ್ಷಮಿಸುವುದಿಲ್ಲ. ಹೀಗಾಗಿ ನಾವು ಮೊದಲು ನಮ್ಮ ಕ್ಷೇತ್ರಗಳ ಅಭಿವೃದ್ಧಿಯ ಕಡೆ ಗಮನ ನೀಡುತ್ತೇವೆ ಎಂದು ಹೇಳಿದರು
ಬಿಎಸ್ವೈ ನಿವಾಸಕ್ಕೆ ಸಂಕೇಶ್ವರ್, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದು, ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಿದ್ದಾರೆ. ಅಲ್ಲದೇ ಚರ್ಚೆಯ ಬಳಿಕ ಯಡಿಯೂರಪ್ಪನವರು ಕೈ ನೋವಿನ ಚಿಕಿತ್ಸೆ ಪಡೆಯಲು ಜಿಂದಾಲ್ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…