ಹಾವೇರಿ: ಪ್ರೀತಿ-ಪ್ರೇಮದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ಶಿಗ್ಗಾವಿ ತಾಲೂಕಿನ ತಡಸದ ಸಮೀಪದ ತಾಯಮ್ಮ ದೇವಸ್ಥಾನ ಹತ್ತಿರ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ್ ಭರಮಪ್ಪ ಬೆಟದೂರು(25) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಉಡುಪಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದ ಪ್ರವೀಣ ಎರಡೂ ದಿನಗಳ ಹಿಂದಷ್ಟೇ ಬೆಳಗಲಿ ಗ್ರಾಮಕ್ಕೆ ಬರುವುದಾಗಿ ಮನೆಯಲ್ಲಿ ತಿಳಿಸಿದ್ದ. ಆದರೆ ತಡಸದ ತಾಯಮ್ಮ ದೇವಸ್ಥಾನ ಹತ್ತಿರ ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ್ದಾನೆ.
ಈ ಘಟನೆಯಲ್ಲಿ ಗಂಭೀರವಾಗಿ ಸುಟ್ಟು ಗಾಯಗೊಂಡಿರುವ ಪ್ರವೀಣ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಕೂಡಲೇ ಸ್ಥಳೀಯ ಪೊಲೀಸರು ಗಾಯಾಳು ಪ್ರವೀಣನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]