ಉಡುಪಿ

ಪೆರ್ಡೂರು : ಕಾಂಗ್ರೆಸ್ ನ್ನು ಗೆಲ್ಲಿಸಿದರೆ ನೀವು ಎಲ್ಲಿ ಕೂತಿದ್ದೀರಿ ಅಲ್ಲೇ ಹಕ್ಕುಪತ್ರ : ವಿನಯ ಕುಮಾರ್ ಸೊರಕೆ – VIshwanews24

ಕಾಂಗ್ರೆಸ್ ನ್ನು ಗೆಲ್ಲಿಸಿದರೆ ನೀವು ಎಲ್ಲಿ ಕೂತಿದ್ದೀರಿ ಅಲ್ಲೇ ಹಕ್ಕುಪತ್ರ : ವಿನಯ ಕುಮಾರ್ ಸೊರಕೆ

ಪೆರ್ಡೂರು: ಸರ್ಕಾರಿ ಜಾಗದಲ್ಲಿ ಬಹಳಷ್ಟು ವರ್ಷಗಳಿಂದ ಮನೆ ಮಾಡಿ ಕೂತವರಿಗೆ ನೀವು ಎಲ್ಲಿ ಕೂತಿದ್ದೀರಿ ಅದೇ ಜಾಗಕ್ಕೆ ಹಕ್ಕುಪತ್ರ ಒದಗಿಸುವ ಕಾರ್ಯವನ್ನು ಕಾನೂನಿನಂತೆ ಮಾಡಿಕೊಡಲಾಗುವುದು ಅಂತಾ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಪೆರ್ಡೂರು ಬುಕ್ಕಿಗುಡ್ಡೆಯ ಕೈರ್ ಎಂಬಲ್ಲಿ ಮನೆ ಮನೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಮಾತನಾಡಿದರು.

ಸರ್ಕಾರಿ ಜಾಗದಲ್ಲಿ ಕೂತ ಬಡವರನ್ನು ಎಬ್ಬಿಸಿ ಬುಲ್ಡೋಜರ್ ಓಡಿಸಿ ಒಕ್ಕಲೆಬ್ಬಿಸುವ ದುಸ್ಸಾಹಸಕ್ಕೆ ಬಿಜೆಪಿ ಕೈ ಹಾಕಿದೆ.ಕಳೆದ 5 ವರ್ಷದ ಬಿಜೆಪಿ ಸಾಧನೆಗಳಲ್ಲಿ ಇದು ಕೂಡಾ ಒಂದು. ಕಾಂಗ್ರೆಸ್ ಇಂದಿರಾಗಾಂಧಿ ಕಾಲದಿಂದಲೂ ಡಿಕ್ಲರೇಷನ್ ಕಾನೂನು ಮೂಲಕ ಭೂಮಿ ನೀಡುವ ಮಹತ್ ಕಾರ್ಯವನ್ನು ಮಾಡಿಕೊಂಡು ಬಂದಿದೆ. ಮುಂದೂ ಕೂಡಾ ಬಡವರು ಸರ್ಕಾರಿ ಜಾಗದಲ್ಲಿ ಕೂತಲ್ಲಿ ಕೂತ ಸ್ಥಳದಲ್ಲೇ ಹಕ್ಕು ಪತ್ರ ನೀಡುವ ಕೆಲಸವನ್ನು ಮಾಡಲಾಗುವುದು ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಬಡವರ ಪಕ್ಷ ಕಾಂಗ್ರೆಸ್ ನ್ನು ಗೆಲ್ಲಿಸಿದರೆ ಹಕ್ಕುಪತ್ರ ಕೊಡುವ ಕಾರ್ಯಕ್ರಮಕ್ಕೆ ಮೊದಲ ಆದ್ಯತೆ ನೀಡಲಾಗುವುದು ಅಂತಾ ಅವರು ಹೇಳಿದರು.

ನಂತರ ಪೆರ್ಡೂರು ವ್ಯಾಪ್ತಿಯ ಹತ್ರಿಬೈಲು ವಿಜಯಲಕ್ಷ್ಮೀ ಕ್ಯಾಶ್ಯೂ ಇಂಡಸ್ಟ್ರೀಸ್ ಮತ್ತು ಬುಕ್ಕಿಗುಡ್ಡೆಯಲ್ಲಿ ಎಪಿಎಂ ಕ್ಯಾಶ್ಯೂ ಇಂಡಸ್ಟ್ರೀಸ್ ಗೆ ಭೇಟಿ ಅಲ್ಲಿನ ಕಾರ್ಮಿಕರ ಸಮಸ್ಯೆಯನ್ನು ಆಲಿಸಿ ಮತಯಾಚನೆ ಮಾಡಿದರು.

ಪೆರ್ಡೂರು ಬುಕ್ಕಿಗುಡ್ಡೆ ಕೈರ್ ವ್ಯಾಪ್ತಿಯಸಂತೋಷ್ ಕುಲಾಲ್, ದಿನೇಶ್ ಪೂಜಾರಿ, ಶೋಭಾ, ರಾಮದಾಸ್, ಹರೀಶ್, ರಾಮ ಕುಲಾಲ್, ರಘುನಾಥ್ ನಾಯ್ಕ್, ಸುಂದರ, ರಾಘವೆ ಶೆಟ್ಟಿ, ಶರತ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

20 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

23 hours ago