ಉಡುಪಿ

ಪೆರ್ಡೂರು ಗೋ ದಳ್ಳಾಲಿ ಸಾವಿನ ಪ್ರಕರಣ …ಬಜರಂಗದಳದ ಮೂರು ಮಂದಿ ಅರೆಸ್ಟ್

ಉಡುಪಿ ಜಿಲ್ಲೆ ಪೆರ್ಡೂರು ಗ್ರಾಮದ ಕೊಟ್ಟಾರು ಹಾಡಿಯಲ್ಲಿ ಹುಸೈನಬ್ಬ ಅವರ ಶವ ನಿನ್ನೆ ಪತ್ತೆಯಾಗಿದೆ. ಸ್ಕಾರ್ಪಿಯೋ ವಾಹನದಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿದ್ದನ್ನು ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದಾಗ ಈ ಹುಸೇನಬ್ಬ ತಪ್ಪಿಸಿಕೊಂಡಿದ್ದ. ಹುಸೈನಬ್ಬ ಅವರದು ಸಹಜ ಸಾವಲ್ಲ ಅವರನ್ನು ಬಜರಂಗ ದಳದ ಮುಖಂಡ ಸೂರಿ ಮತ್ತವರ ಬೆಂಬಲಿಗರು ಸೇರಿ ಹತ್ಯೆ ಮಾಡಿದ್ದಾರೆಂದು ಹುಸೈನಬ್ಬ ಅವರ ಸಂಬಂಧಿಗಳು ದೂರು ನೀಡಿದ್ದರು.ಮೃತ ವ್ಯಕ್ತಿ ಕಳೆದ 35 ವರ್ಷಗಳಿಂದ ಪೆರ್ಡೂರು ಸುತ್ತ ಮುತ್ತ ದಲ್ಲಾಳಿಗಳ ಮೂಲಕ ದನ ಖರೀದಿಸಿ ಸಾಗಿಸುತ್ತಿದ್ದ ಅದೇ ರೀತಿ ಮೇ.29ರಂದು ಬೆಳಗಿನ ಜಾವ ಎಂದಿನಂತೆ ಸ್ಕಾರ್ಪಿಯೋದಲ್ಲಿ ನಾಲ್ವರೊಂದಿಗೆ ದನ ಖರೀದಿಗೆ ಬೆಳಗ್ಗೆ ಹೊರಟಾಗ ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿದ್ದಾರೆ. ಈ ವೇಳೆ ಹೆದರಿದ ಹುಸೈನಬ್ಬ ವಾಹನ ಬಿಟ್ಟು ಓಡಿ ಹೋಗಿದ್ದರು.

ನಂತರ ಅಕ್ರಮ ಜಾನುವಾರು ಸಾಗಣೆ ಎಂದು ಹಿರಿಯಡ್ಕ ಠಾಣೆಯಲ್ಲಿ ಪಿಎಸ್‍ಐ ಡಿ.ಎನ್. ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ, ಈ ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲವೆಂದು ಪಿಎಸ್‍ಐ ಕುಮಾರ್ ಅವರನ್ನು ಅಮಾನತ್ತು ಕೂಡ ಮಾಡಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿಗಳು:
ಈ ಮಧ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಜರಂಗದಳದ ಕಾರ್ಯಕರ್ತರು ತಲೆ ಮರೆಸಿಕೊಂಡಿದ್ದರು. ಅವರು ಬಳ್ಳಾರಿ ನಗರಕ್ಕೆ.ಎ.20 ಎಂ.ಬಿ.7864 ಕಾರಿನಲ್ಲಿ ಬಂದು ಆಶ್ರಯ ಪಡೆದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಎಸ್.ಪಿ. ಅವರು ಬಳ್ಳಾರಿ ಎಸ್ಪಿ ಅವರಿಗೆ ಮಾಹಿತಿ ನೀಡಿ ಅವರನ್ನು ಬಂಧಿಸಲು ಸೂಚಿಸಿದ್ದರಂತೆ.

ಈ ಹಿನ್ನೆಲೆಯಲ್ಲಿ 3 ತಂಡಗಳಾಗಿ ಪೊಲೀಸರು ನಿನ್ನೆ ರಾತ್ರಿ ಪರಿಶೀಲನೆ ಮಾಡಿ ಹೆಚ್.ಪ್ರಸಾದ್, ದೀಪಕ್ ಅಲಿಯಾಸ್ ಶೆಟ್ಟಿ ಮತ್ತು ಸುರೇಶ್ ಮೆಂಡನ್ ಅಲಿಯಾಸ್ ಸೂರಿ ಎಂಬುವರನ್ನು ಬಂಧಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

40 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

51 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

58 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

1 hour ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago