ಉಡುಪಿ

ಪೆರ್ಡೂರು ಗೋ ದಳ್ಳಾಲಿ ಸಾವಿನ ಪ್ರಕರಣ …ಬಜರಂಗದಳದ ಮೂರು ಮಂದಿ ಅರೆಸ್ಟ್

ಉಡುಪಿ ಜಿಲ್ಲೆ ಪೆರ್ಡೂರು ಗ್ರಾಮದ ಕೊಟ್ಟಾರು ಹಾಡಿಯಲ್ಲಿ ಹುಸೈನಬ್ಬ ಅವರ ಶವ ನಿನ್ನೆ ಪತ್ತೆಯಾಗಿದೆ. ಸ್ಕಾರ್ಪಿಯೋ ವಾಹನದಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿದ್ದನ್ನು ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದಾಗ ಈ ಹುಸೇನಬ್ಬ ತಪ್ಪಿಸಿಕೊಂಡಿದ್ದ. ಹುಸೈನಬ್ಬ ಅವರದು ಸಹಜ ಸಾವಲ್ಲ ಅವರನ್ನು ಬಜರಂಗ ದಳದ ಮುಖಂಡ ಸೂರಿ ಮತ್ತವರ ಬೆಂಬಲಿಗರು ಸೇರಿ ಹತ್ಯೆ ಮಾಡಿದ್ದಾರೆಂದು ಹುಸೈನಬ್ಬ ಅವರ ಸಂಬಂಧಿಗಳು ದೂರು ನೀಡಿದ್ದರು.ಮೃತ ವ್ಯಕ್ತಿ ಕಳೆದ 35 ವರ್ಷಗಳಿಂದ ಪೆರ್ಡೂರು ಸುತ್ತ ಮುತ್ತ ದಲ್ಲಾಳಿಗಳ ಮೂಲಕ ದನ ಖರೀದಿಸಿ ಸಾಗಿಸುತ್ತಿದ್ದ ಅದೇ ರೀತಿ ಮೇ.29ರಂದು ಬೆಳಗಿನ ಜಾವ ಎಂದಿನಂತೆ ಸ್ಕಾರ್ಪಿಯೋದಲ್ಲಿ ನಾಲ್ವರೊಂದಿಗೆ ದನ ಖರೀದಿಗೆ ಬೆಳಗ್ಗೆ ಹೊರಟಾಗ ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿದ್ದಾರೆ. ಈ ವೇಳೆ ಹೆದರಿದ ಹುಸೈನಬ್ಬ ವಾಹನ ಬಿಟ್ಟು ಓಡಿ ಹೋಗಿದ್ದರು.

ನಂತರ ಅಕ್ರಮ ಜಾನುವಾರು ಸಾಗಣೆ ಎಂದು ಹಿರಿಯಡ್ಕ ಠಾಣೆಯಲ್ಲಿ ಪಿಎಸ್‍ಐ ಡಿ.ಎನ್. ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ, ಈ ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲವೆಂದು ಪಿಎಸ್‍ಐ ಕುಮಾರ್ ಅವರನ್ನು ಅಮಾನತ್ತು ಕೂಡ ಮಾಡಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿಗಳು:
ಈ ಮಧ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಜರಂಗದಳದ ಕಾರ್ಯಕರ್ತರು ತಲೆ ಮರೆಸಿಕೊಂಡಿದ್ದರು. ಅವರು ಬಳ್ಳಾರಿ ನಗರಕ್ಕೆ.ಎ.20 ಎಂ.ಬಿ.7864 ಕಾರಿನಲ್ಲಿ ಬಂದು ಆಶ್ರಯ ಪಡೆದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಎಸ್.ಪಿ. ಅವರು ಬಳ್ಳಾರಿ ಎಸ್ಪಿ ಅವರಿಗೆ ಮಾಹಿತಿ ನೀಡಿ ಅವರನ್ನು ಬಂಧಿಸಲು ಸೂಚಿಸಿದ್ದರಂತೆ.

ಈ ಹಿನ್ನೆಲೆಯಲ್ಲಿ 3 ತಂಡಗಳಾಗಿ ಪೊಲೀಸರು ನಿನ್ನೆ ರಾತ್ರಿ ಪರಿಶೀಲನೆ ಮಾಡಿ ಹೆಚ್.ಪ್ರಸಾದ್, ದೀಪಕ್ ಅಲಿಯಾಸ್ ಶೆಟ್ಟಿ ಮತ್ತು ಸುರೇಶ್ ಮೆಂಡನ್ ಅಲಿಯಾಸ್ ಸೂರಿ ಎಂಬುವರನ್ನು ಬಂಧಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

11 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

13 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

14 hours ago