ಉಡುಪಿ

ಪೆರ್ಡೂರು ಗೋ ದಳ್ಳಾಲಿ ಸಾವಿನ ಪ್ರಕರಣ …ಬಜರಂಗದಳದ ಮೂರು ಮಂದಿ ಅರೆಸ್ಟ್

ಉಡುಪಿ ಜಿಲ್ಲೆ ಪೆರ್ಡೂರು ಗ್ರಾಮದ ಕೊಟ್ಟಾರು ಹಾಡಿಯಲ್ಲಿ ಹುಸೈನಬ್ಬ ಅವರ ಶವ ನಿನ್ನೆ ಪತ್ತೆಯಾಗಿದೆ. ಸ್ಕಾರ್ಪಿಯೋ ವಾಹನದಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿದ್ದನ್ನು ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದಾಗ ಈ ಹುಸೇನಬ್ಬ ತಪ್ಪಿಸಿಕೊಂಡಿದ್ದ. ಹುಸೈನಬ್ಬ ಅವರದು ಸಹಜ ಸಾವಲ್ಲ ಅವರನ್ನು ಬಜರಂಗ ದಳದ ಮುಖಂಡ ಸೂರಿ ಮತ್ತವರ ಬೆಂಬಲಿಗರು ಸೇರಿ ಹತ್ಯೆ ಮಾಡಿದ್ದಾರೆಂದು ಹುಸೈನಬ್ಬ ಅವರ ಸಂಬಂಧಿಗಳು ದೂರು ನೀಡಿದ್ದರು.ಮೃತ ವ್ಯಕ್ತಿ ಕಳೆದ 35 ವರ್ಷಗಳಿಂದ ಪೆರ್ಡೂರು ಸುತ್ತ ಮುತ್ತ ದಲ್ಲಾಳಿಗಳ ಮೂಲಕ ದನ ಖರೀದಿಸಿ ಸಾಗಿಸುತ್ತಿದ್ದ ಅದೇ ರೀತಿ ಮೇ.29ರಂದು ಬೆಳಗಿನ ಜಾವ ಎಂದಿನಂತೆ ಸ್ಕಾರ್ಪಿಯೋದಲ್ಲಿ ನಾಲ್ವರೊಂದಿಗೆ ದನ ಖರೀದಿಗೆ ಬೆಳಗ್ಗೆ ಹೊರಟಾಗ ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿದ್ದಾರೆ. ಈ ವೇಳೆ ಹೆದರಿದ ಹುಸೈನಬ್ಬ ವಾಹನ ಬಿಟ್ಟು ಓಡಿ ಹೋಗಿದ್ದರು.

ನಂತರ ಅಕ್ರಮ ಜಾನುವಾರು ಸಾಗಣೆ ಎಂದು ಹಿರಿಯಡ್ಕ ಠಾಣೆಯಲ್ಲಿ ಪಿಎಸ್‍ಐ ಡಿ.ಎನ್. ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ, ಈ ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲವೆಂದು ಪಿಎಸ್‍ಐ ಕುಮಾರ್ ಅವರನ್ನು ಅಮಾನತ್ತು ಕೂಡ ಮಾಡಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿಗಳು:
ಈ ಮಧ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಜರಂಗದಳದ ಕಾರ್ಯಕರ್ತರು ತಲೆ ಮರೆಸಿಕೊಂಡಿದ್ದರು. ಅವರು ಬಳ್ಳಾರಿ ನಗರಕ್ಕೆ.ಎ.20 ಎಂ.ಬಿ.7864 ಕಾರಿನಲ್ಲಿ ಬಂದು ಆಶ್ರಯ ಪಡೆದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಎಸ್.ಪಿ. ಅವರು ಬಳ್ಳಾರಿ ಎಸ್ಪಿ ಅವರಿಗೆ ಮಾಹಿತಿ ನೀಡಿ ಅವರನ್ನು ಬಂಧಿಸಲು ಸೂಚಿಸಿದ್ದರಂತೆ.

ಈ ಹಿನ್ನೆಲೆಯಲ್ಲಿ 3 ತಂಡಗಳಾಗಿ ಪೊಲೀಸರು ನಿನ್ನೆ ರಾತ್ರಿ ಪರಿಶೀಲನೆ ಮಾಡಿ ಹೆಚ್.ಪ್ರಸಾದ್, ದೀಪಕ್ ಅಲಿಯಾಸ್ ಶೆಟ್ಟಿ ಮತ್ತು ಸುರೇಶ್ ಮೆಂಡನ್ ಅಲಿಯಾಸ್ ಸೂರಿ ಎಂಬುವರನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

7 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

7 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

8 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

9 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

9 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

9 hours ago