ಉಡುಪಿ

ಪೆರ್ಣಂಕಿಲ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ : vishwanews24

ಪೆರ್ಣಂಕಿಲ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ : vishwanews24

ಹಿರಿಯಡ್ಕ: ಇಲ್ಲಿನ ಪೆರ್ಣಂಕಿಲ ಗ್ರಾಮದಲ್ಲಿ, ಪೇಜಾವರ ಮಠದ ಆಡಳಿತಕ್ಕೊಳಪಟ್ಟಿರುವ, ಸುಮಾರು 1500 ವರ್ಷಗಳ ಐತಿಹ್ಯವಿರುವ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮಾ.17ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭವಾಗಿ ಏ. 2ರಂದು ಜಾತ್ರೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.
ಈ ಬಗ್ಗೆ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಶಾ ನಾಯಕ್ ಪೆರ್ಣಂಕಿಲ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪೇಜಾವರ ಮಠದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಹಲವು ಸಮಯದ ಆಶಯದಂತೆ, ಅವರ ಶಿಷ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಈ ಕ್ಷೇತ್ರವನ್ನು ಜೀರ್ಣೋದ್ಧಾರದ ಸಂಕಲ್ಪ ಮಾಡಿದ್ದಾರೆ. ಭಕ್ತರ ಸಹಕಾರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ದೇವಳಗಳ ಜೀರ್ಣೋದ್ಧಾರ, 5 ಕೋಟಿ ರು. ವೆಚ್ಚದಲ್ಲಿ ಪೇಜಾವರ ಶಾಖಾ ಮಠದ ಪುನರ್ನಿರ್ಮಾಣ ಮತ್ತು 5 ಕೋಟಿ ರು. ವೆಚ್ಚದಲ್ಲಿ ಸಭಾಂಗಣ ಮತ್ತು ಭೋಜನಾಲಯ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು ಕೊನೆಯ ಹಂತದಲ್ಲಿವೆ. ಮುಂದೆ ಶ್ರೀಗಳು ಗುರುಕುಲ ಮತ್ತು ಗೋಶಾಲೆಗಳ ನಿರ್ಮಾಣದ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದರು.
ತೀರಾ ಗ್ರಾಮೀಣ ಭಾಗದಲ್ಲಿ ಇಷ್ಟೆಲ್ಲಾ ಯೋಜನೆಗಳಿಗೆ ದಾನಿಗಳನ್ನು ಹುಡುಕಿಕೊಂಡು ಹೋಗದೇ ಅವರೇ ಕ್ಷೇತ್ರಕ್ಕೆ ಬಂದು ದೇಣಿಗೆ ಸಮರ್ಪಿಸುತ್ತಿರುವ ಕ್ಷೇತ್ರದ ಪಾವಿತ್ರ್ಯತೆ, ಶಕ್ತಿಯನ್ನು ಸೂಚಿಸುತ್ತಿದೆ ಎಂದವರು ಸಂತಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪೇಜಾವರ ಮಠದ ದಿವಾಣರಾದ ಸುಬ್ರಹ್ಮಣ್ಯ ಭಟ್, ಕ್ಷೇತ್ರದ ತಂತ್ರಿಗಳಾದ ಮಧುಸೂಧನ ತಂತ್ರಿ ಹಾಗೂ ವಾಸ್ತುಶಾಸ್ತ್ರಜ್ಞರಾದ ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಉಪಸ್ಥಿತರಿದ್ದರು.

 “ಪೆರ್ಣನ ಅಂಕಿಲದಿಂದ ಉದ್ಭವವಾದ ಗಣಪತಿ
ಹಚ್ಚಹಸಿರಿನ ಪ್ರಕೃತಿ ಮಧ್ಯೆ ಇರುವ ಕ್ಷೇತ್ರದಲ್ಲಿ ಶಿವವನ್ನು ಪುರಾಣಕಾಲದಲ್ಲಿ ಖರಾಸುರನು ಪ್ರತಿಷ್ಠಾಪಿಸಿ ಎಂದು ಸ್ಥಳ ಪುರಾಣ ಹೇಳುತ್ತದೆ. ನಂತರ ಇಲ್ಲಿಯೇ ಸಮೀಪದಲ್ಲಿ ಪೆರ್ಣ ಎಂಬ ರೈತ ಗದ್ದೆ ಉಳುತಿದ್ದಾಗ ಆತನ ಅಂಕಿಲ (ನೆಗಿಲ ಮೊನೆ)ಕ್ಕೆ ಸಿಕ್ಕಿ ಗಣಪತಿ ವಿಗ್ರಹ ಉದ್ಭವವಾಯಿತು ಎಂದು ಐತಿಹ್ಯವಿದೆ. ಇಲ್ಲಿನ ಶಿಲಾಶಾಸನದಲ್ಲಿ ಬಾರ್ಕೂರಿನ ಅಳುಪರ ರಾಣಿ ಬಲ್ಲಮಹಾದೇವಿಯು ಈ ಶಿಲಾಮಯ ಗುಡಿಗಳ ನಿರ್ಮಾಣಕ್ಕೆ ಧನಸಹಾಯ ಮಾಡಿದ ಇತಿಹಾಸವಿದೆ. ಕಾಲಕ್ರಮೇಣ ಕ್ಷೇತ್ರದ ಆಡಳಿತವು ಪೇಜಾವರ ಮಠಕ್ಕೊಳಪಟ್ಟಿದೆ. 1989ರಲ್ಲೊಮ್ಮೆ ಬ್ರಹ್ಮಕಲಶೋತ್ಸವ ನಡೆದಿದ್ದು, ಈಗ ಸಂಪೂರ್ಣ ಜೀರ್ಣೋದ್ಧಾರದೊಂದಿಗೆ ಮತ್ತೇ ಬ್ರಹ್ಮಕಲಶೋತ್ಸವಕ್ಕೆ ಸಿದ್ದವಾಗಿದೆ.”

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

18 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

18 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

18 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

19 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

19 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

19 hours ago