ಉಡುಪಿ

ಪೆರ್ಣಂಕಿಲ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ : vishwanews24

ಪೆರ್ಣಂಕಿಲ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ : vishwanews24

ಹಿರಿಯಡ್ಕ: ಇಲ್ಲಿನ ಪೆರ್ಣಂಕಿಲ ಗ್ರಾಮದಲ್ಲಿ, ಪೇಜಾವರ ಮಠದ ಆಡಳಿತಕ್ಕೊಳಪಟ್ಟಿರುವ, ಸುಮಾರು 1500 ವರ್ಷಗಳ ಐತಿಹ್ಯವಿರುವ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮಾ.17ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭವಾಗಿ ಏ. 2ರಂದು ಜಾತ್ರೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.
ಈ ಬಗ್ಗೆ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಶಾ ನಾಯಕ್ ಪೆರ್ಣಂಕಿಲ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪೇಜಾವರ ಮಠದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಹಲವು ಸಮಯದ ಆಶಯದಂತೆ, ಅವರ ಶಿಷ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಈ ಕ್ಷೇತ್ರವನ್ನು ಜೀರ್ಣೋದ್ಧಾರದ ಸಂಕಲ್ಪ ಮಾಡಿದ್ದಾರೆ. ಭಕ್ತರ ಸಹಕಾರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ದೇವಳಗಳ ಜೀರ್ಣೋದ್ಧಾರ, 5 ಕೋಟಿ ರು. ವೆಚ್ಚದಲ್ಲಿ ಪೇಜಾವರ ಶಾಖಾ ಮಠದ ಪುನರ್ನಿರ್ಮಾಣ ಮತ್ತು 5 ಕೋಟಿ ರು. ವೆಚ್ಚದಲ್ಲಿ ಸಭಾಂಗಣ ಮತ್ತು ಭೋಜನಾಲಯ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು ಕೊನೆಯ ಹಂತದಲ್ಲಿವೆ. ಮುಂದೆ ಶ್ರೀಗಳು ಗುರುಕುಲ ಮತ್ತು ಗೋಶಾಲೆಗಳ ನಿರ್ಮಾಣದ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದರು.
ತೀರಾ ಗ್ರಾಮೀಣ ಭಾಗದಲ್ಲಿ ಇಷ್ಟೆಲ್ಲಾ ಯೋಜನೆಗಳಿಗೆ ದಾನಿಗಳನ್ನು ಹುಡುಕಿಕೊಂಡು ಹೋಗದೇ ಅವರೇ ಕ್ಷೇತ್ರಕ್ಕೆ ಬಂದು ದೇಣಿಗೆ ಸಮರ್ಪಿಸುತ್ತಿರುವ ಕ್ಷೇತ್ರದ ಪಾವಿತ್ರ್ಯತೆ, ಶಕ್ತಿಯನ್ನು ಸೂಚಿಸುತ್ತಿದೆ ಎಂದವರು ಸಂತಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪೇಜಾವರ ಮಠದ ದಿವಾಣರಾದ ಸುಬ್ರಹ್ಮಣ್ಯ ಭಟ್, ಕ್ಷೇತ್ರದ ತಂತ್ರಿಗಳಾದ ಮಧುಸೂಧನ ತಂತ್ರಿ ಹಾಗೂ ವಾಸ್ತುಶಾಸ್ತ್ರಜ್ಞರಾದ ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಉಪಸ್ಥಿತರಿದ್ದರು.

 “ಪೆರ್ಣನ ಅಂಕಿಲದಿಂದ ಉದ್ಭವವಾದ ಗಣಪತಿ
ಹಚ್ಚಹಸಿರಿನ ಪ್ರಕೃತಿ ಮಧ್ಯೆ ಇರುವ ಕ್ಷೇತ್ರದಲ್ಲಿ ಶಿವವನ್ನು ಪುರಾಣಕಾಲದಲ್ಲಿ ಖರಾಸುರನು ಪ್ರತಿಷ್ಠಾಪಿಸಿ ಎಂದು ಸ್ಥಳ ಪುರಾಣ ಹೇಳುತ್ತದೆ. ನಂತರ ಇಲ್ಲಿಯೇ ಸಮೀಪದಲ್ಲಿ ಪೆರ್ಣ ಎಂಬ ರೈತ ಗದ್ದೆ ಉಳುತಿದ್ದಾಗ ಆತನ ಅಂಕಿಲ (ನೆಗಿಲ ಮೊನೆ)ಕ್ಕೆ ಸಿಕ್ಕಿ ಗಣಪತಿ ವಿಗ್ರಹ ಉದ್ಭವವಾಯಿತು ಎಂದು ಐತಿಹ್ಯವಿದೆ. ಇಲ್ಲಿನ ಶಿಲಾಶಾಸನದಲ್ಲಿ ಬಾರ್ಕೂರಿನ ಅಳುಪರ ರಾಣಿ ಬಲ್ಲಮಹಾದೇವಿಯು ಈ ಶಿಲಾಮಯ ಗುಡಿಗಳ ನಿರ್ಮಾಣಕ್ಕೆ ಧನಸಹಾಯ ಮಾಡಿದ ಇತಿಹಾಸವಿದೆ. ಕಾಲಕ್ರಮೇಣ ಕ್ಷೇತ್ರದ ಆಡಳಿತವು ಪೇಜಾವರ ಮಠಕ್ಕೊಳಪಟ್ಟಿದೆ. 1989ರಲ್ಲೊಮ್ಮೆ ಬ್ರಹ್ಮಕಲಶೋತ್ಸವ ನಡೆದಿದ್ದು, ಈಗ ಸಂಪೂರ್ಣ ಜೀರ್ಣೋದ್ಧಾರದೊಂದಿಗೆ ಮತ್ತೇ ಬ್ರಹ್ಮಕಲಶೋತ್ಸವಕ್ಕೆ ಸಿದ್ದವಾಗಿದೆ.”

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago