ಬೆಂಗಳೂರು : ಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ವೇಳೆ ಪೇಂಟ್ ಮಿಕ್ಸರ್ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ.
ಮೃತರನ್ನು 33 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆ ಕೆಲಸ ಮಾಡುತ್ತಿದ್ದರು. ಆದ್ರೆ, ನಿನ್ನೆ ಬಣ್ಣ ಬೆರೆಸುವ ಗ್ರೈಂಡರ್ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾ ತಲೆ ಕತ್ತರಿಸಿ ಹೋಗಿದೆ. ಇದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ.
ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್ ಒಳಗೆ ಬಗ್ಗಿದಾಗ ಮಹಿಳೆಯ ಜಡೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಮಹಿಳೆ ಗ್ರೈಂಡರ್ಗೆ ಸಿಲುಕಿ ಮೃತಪಟ್ಟ ಬಳಿಕ ಉಳಿದ ಕೆಲಸಗಾರರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಗ್ರೈಂಡರ್ ಸ್ಪೀಡ್ಗೆ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ. ಈ ಬಗ್ಗೆ ಪ್ರಕರಣ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…