ಬೆಂಗಳೂರು : ಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ವೇಳೆ ಪೇಂಟ್ ಮಿಕ್ಸರ್ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ.
ಮೃತರನ್ನು 33 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆ ಕೆಲಸ ಮಾಡುತ್ತಿದ್ದರು. ಆದ್ರೆ, ನಿನ್ನೆ ಬಣ್ಣ ಬೆರೆಸುವ ಗ್ರೈಂಡರ್ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾ ತಲೆ ಕತ್ತರಿಸಿ ಹೋಗಿದೆ. ಇದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ.
ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್ ಒಳಗೆ ಬಗ್ಗಿದಾಗ ಮಹಿಳೆಯ ಜಡೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಮಹಿಳೆ ಗ್ರೈಂಡರ್ಗೆ ಸಿಲುಕಿ ಮೃತಪಟ್ಟ ಬಳಿಕ ಉಳಿದ ಕೆಲಸಗಾರರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಗ್ರೈಂಡರ್ ಸ್ಪೀಡ್ಗೆ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ. ಈ ಬಗ್ಗೆ ಪ್ರಕರಣ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…