Featured

ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರ -Vishwanews24

ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾ ಇರಿಸಿದ್ದಾರೆ. ತಡರಾತ್ರಿ ಎಂಆರ್‌ಐ ಸ್ಕ್ಯಾನಿಂಗ್ ನಡೆಸಲಾಗಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ.

ಹಾಸನದ ಅರೆಮಾದನಹಳ್ಳಿಯ ವಿಶ್ವ ಬ್ರಾಹ್ಮಣ ಮಹಾ ಸಂಸ್ಥಾನದ ಶಿವಸುಜ್ಞಾನ ತೀರ್ಥರು ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಯೋಗಕ್ಷೇಮ ವಿಚಾರಿಸಿದರು. ಪೇಜಾವರ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥರೊಂದಿಗೆ ಚರ್ಚಿಸಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿ, ‘ಶ್ರೀಗಳಲ್ಲಿನ ಮಗುವಿನಂತಹ ಮುಗ್ಧತೆ, ಅದಮ್ಯ ಚೇತನ್ಯ ಎಲ್ಲರನ್ನೂ ಬೆರಗುಗೊಳಿಸುವಂಥದ್ದು. ಸ್ವಾಮೀಜಿ ಮತ್ತಷ್ಟು ಧರ್ಮದ ಕೆಲಸ ಮಾಡಬೇಕು. ಗುಣಮುಖರಾಗುವ ನಂಬಿಕೆ ಇದೆ’ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಶಾಸಕ ರವಿ ಸುಬ್ರಹ್ಮಣ್ಯ, ‘ಸ್ವಾಮೀಜಿ ಹಾಸಿಗೆ ಹಿಡಿದವರಲ್ಲ. ಎಲ್ಲಾ ಧರ್ಮ, ಜಾತಿಗೆ ಬೇಕಾಗಿರುವ ಶ್ರೀಗಳು ಬೇಗ ಚೇತರಿಸಿಕೊಳ್ಳಲಿ. ರಾಮಮಂದಿರ ನಿರ್ಮಾಣ ಕಾಲದಲ್ಲಿ ಶ್ರೀಗಳು ಇರಬೇಕು. ರಾಮಮಂದಿರ ನೋಡಬೇಕು’ ಎಂದರು.

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಮಾತನಾಡಿ, ‘ಶ್ರೀಗಳು ಉಸಿರಾಡುತ್ತಿದ್ದಾರೆ. ಎಂಆರ್‌ಐ ವರದಿಗೆ ವೈದ್ಯರು ಕಾಯುತ್ತಿದ್ದಾರೆ. ದೇವರ ಅನುಗ್ರಹದಿಂದ ಚೇತರಿಕೆಯಾಗುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.

ನಿರ್ಬಂಧ: ಇನ್ನು ಶ್ರೀಗಳ ಆರೋಗ್ಯ ವಿಚಾರಿಸಲು ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಭೇಟಿಗೆ ನಿರ್ಬಂಧ ಹಾಕಲಾಗಿದೆ. ವೈದ್ಯರ ತಂಡ ತೀವ್ರ ನಿಗಾ ವಹಿಸಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಕೆಎಂಸಿ ಆಸ್ಪತ್ರೆಗೆ ಯಾರೊಬ್ಬರೂ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಶ್ರೀಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಉಳಿದಂತೆ ಬೆಳಿಗಿನಿಂದ ಯಾರೊಬ್ಬರನ್ನು ಒಳಬಿಟ್ಟಿಲ್ಲ.
ಇದರ ನಡುವೆ ಶ್ರೀಗಳ ಆರೋಗ್ಯ ಸ್ಥಿತಿ ಸುಧಾರಣೆಯಾಗಲೆಂದು ನಾಡಿನಾದ್ಯಂತ ಪೂಜೆ, ಹವನಗಳು ನಡೆಯುತ್ತಿವೆ. ಪೇಜಾವರ ಶ್ರೀಗಳ ಸಾವಿರಾರು ಭಕ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಎಂದಿನಂತೆ ಶ್ರೀಗಳು ನಡೆದಾಡುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago