ಉಡುಪಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಚಿಕಿತ್ಸೆ ಮುಂದುವರಿದಿದೆ.
ಐಸಿಯುನಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಈ ಮಧ್ಯೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೋನ್ ಕರೆ ಮಾಡಿ, ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ತುರ್ತು ನೆರವು ಅಗತ್ಯವಿದ್ದಲ್ಲಿ ತಿಳಿಸುವಂತೆ ಪೇಜಾವರಶ್ರೀ ಆಪ್ತಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಶುಕ್ರವಾರ ಕೆಎಂಸಿ ಮಣಿಪಾಲದ ಹಿರಿಯ ವೈದ್ಯೆ ಡಾ. ಸುಧಾ ವಿದ್ಯಾಸಾಗರ್ ದಿನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಉಸಿರಾಟದ ಸಮಸ್ಯೆಯಿಂದ ಸ್ವಾಮೀಜಿ ಕೆಎಂಸಿಗೆ ಬೆಳಗ್ಗೆ ದಾಖಲಾಗಿದ್ದರು. ಈಗ ಕೊಂಚ ಚೇತರಿಸಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗುವಾಗ ಬಹಳ ಸಮಸ್ಯೆಯಿತ್ತು ಎಂದು ಹೇಳಿದರು. ಶ್ರೀಗಳಿಗೆ ವೆಂಟಿಲೇಟರ್ ಅಳವಡಿಸಿದ್ದೇವೆ, ಚೇತರಿಸಿಕೊಳ್ಳಲು ಮದ್ದುಗಳನ್ನು ಹಾಕಿರುವುದರಿಂದ ಅಮಲಿನಲ್ಲಿದ್ದಾರೆ ಎಂದು ತಿಳಿಸಿದ್ದರು.
ಪೇಜಾವರ ಶ್ರೀಗಳಿಗೆ ಕೆಎಂಸಿಯ ಆರು ತಜ್ಞ ವೈದ್ಯರಿಂದ ಚಿಕಿತ್ಸೆ ಸಿಗುತ್ತಿದೆ. ಡಾ. ಸುಧಾ ವಿದ್ಯಾಸಾಗರ್ ವೈದ್ಯರ ತಂಡದ ನೇತೃತ್ವ ವಹಿಸಿದ್ದು, ರವಿರಾಜ್ ಆಚಾರ್ಯ, ಡಾ. ಶ್ವೇತಪ್ರಿಯ, ಡಾ. ಮಂಜುನಾಥ ಹಂದೆ, ಡಾ. ಪದ್ಮಕುಮಾರ್, ಡಾ. ವಿಶಾಲ್ ಶಾನುಭೋಗ್ ಅವರು 24 ಗಂಟೆ ನಿಗಾ ವಹಿಸಲಿದ್ದಾರೆ. ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಶ್ರೀಗಳ ಚಿಕಿತ್ಸೆಯ ಸಂಪೂರ್ಣ ಮೇಲ್ವಿಚಾರಣೆ ಜವಾಬ್ದಾರಿ ಹೊತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…