ಉಡುಪಿ: ಭಾರತ ಸರ್ಕಾರದಿಂದ ಕೀರ್ತಿ ಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ನವಂಬರ್ 11 ಗುರುವಾರದಂದು ಸಂಜೆ ಉಡುಪಿಯಲ್ಲಿ ಭಕ್ತಿ ಗೌರವಪೂರ್ವಕವಾಗಿ ಸ್ವಾಗತಿಸಲಾಗುವುದು .
ಅಂದು ಸಂಜೆ 4.30 ಕ್ಕೆ ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪದ್ಮವಿಭೂಷಣ ಪ್ರಶಸ್ತಿಯನ್ನು ಇಟ್ಟು ಸಾಂಪ್ರದಾಯಿಕ ಬಿರುದಾವಳಿ ಚಂಡೆ ವಾದ್ಯಮೇಳಗಳ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠಕ್ಕೆ ತರಲಾಗುವುದು . ಶ್ರೀ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಕೃಷ್ಣ ದೇವರಿಗೆ ಅರ್ಪಿಸಿ , ಅಷ್ಟ ಮಠಾಧೀಶರುಗಳಿಗೆ ಅದನ್ನು ಪ್ರದರ್ಶಿಸಿ ಬಳಿಕ ಪುನಃ ಅದೇ ವಾಹನದಲ್ಲಿ ಶ್ರೀ ಪೇಜಾವರ ಮಠಕ್ಕೆ ತರಲಾಗುವುದು. ಅಲ್ಲಿ ಗುರುಗಳ ಪೀಠದಲ್ಲಿಟ್ಟು ಅರ್ಪಿಸಿದ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ವಿವಿಧ ಮಠಾಧೀಶರುಗಳು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಸಭೆ ಪೇಜಾವರ ಮಠದ ಮುಂಭಾಗದಲ್ಲಿ ನಡೆಯಲಿದೆ .
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…