Featured

ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ : ಗೇಲ್‌ ಕಂಪೆನಿ ಅಧಿಕಾರಿಗಳಿಗೆ ಭರತ್‌ ಶೆಟ್ಟಿ ಎಚ್ಚರಿಕೆ – Vishwanews24

ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ : ಗೇಲ್‌ ಕಂಪೆನಿ ಅಧಿಕಾರಿಗಳಿಗೆ ಭರತ್‌ ಶೆಟ್ಟಿ ಎಚ್ಚರಿಕೆ

ಮಂಗಳೂರು : ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.

ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು.

ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ” ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂಪೆನಿ ಅಧಿಕಾರಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago