ಮಂಗಳೂರು : ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.
ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು.
ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ” ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂಪೆನಿ ಅಧಿಕಾರಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…