‘ಪೈಲ್ವಾನ್’ ಡ್ಯಾನ್ಸ್ ಮಾಸ್ಟರ್ ಗಣೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ -Vishwanews24

ಮುಂಬೈ: ಬಾಲಿವುಡ್‍ನ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ಅವರ ವಿರುದ್ಧ 33 ವರ್ಷದ ಮಹಿಳೆ ಕಿರುಕುಳದ ಆರೋಪ ಮಾಡಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್‍ಸಿಡಬ್ಲ್ಯು)ಗೆ ಪತ್ರ ಬರೆದು ದೂರು ನೀಡಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ ಜೊತೆಗೆ ಅಂಬೋಲಿ ಪೊಲೀಸ್ ಠಾಣೆಯಲ್ಲೂ ದೂರು ನೀಡಿದ್ದಾರೆ. ಆಚಾರ್ಯ ಅವರ ಕಚೇರಿಗೆ ಹೋದಾಗಲೆಲ್ಲಾ ಪೋರ್ನ್ ವಿಡಿಯೋಗಳನ್ನು ನೋಡುವಂತೆ ಒತ್ತಾಯಿಸುತ್ತಿದ್ದರು. ಅಲ್ಲದೇ ತನಗೆ ಬರುವ ಆದಾಯದಲ್ಲಿ ಕಮಿಷನ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮುಂಬೈನ ಅಂಧೇರಿಯಲ್ಲಿ ಭಾನುವಾರ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನೃತ್ಯ ಸಂಯೋಜಕರ ಸಂಘ (ಐಎಫ್‍ಟಿಸಿಎ)ದ ಸಮಾರಂಭ ನಡೆದಿತ್ತು. ಅಲ್ಲಿ ಗಣೇಶ್ ಆಚಾರ್ಯ ಮತ್ತು ಇಬ್ಬರು ಮಹಿಳೆಯರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ಗಣೇಶ್ ಆಚಾರ್ಯ ಜೊತೆಗೆ ಜಯಶ್ರೀ ಕೆಲ್ಕರ್ ಮತ್ತು ಪ್ರೀತಿ ಲಾಡ್ ಎಂಬವರು ಹಲ್ಲೆ ಮಾಡಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೃತ್ಯ ಸಂಯೋಜಕ ಸಂಘದ ಸದಸ್ಯೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಗಣೇಶ್ ಆಚಾರ್ಯ ಆಗಾಗ ಕಚೇರಿಗೆ ಕರೆಯುತ್ತಿದ್ದರು. ಜನವರಿ 26 ರಂದು ಕಚೇರಿಗೆ ಹೋದಾಗ ನೃತ್ಯ ಸಂಯೋಜಕ ಸಂಘದಲ್ಲಿ ಸದಸ್ಯತ್ವ ರದ್ದು ಮಾಡಿಸಿದ್ದಾರೆ. ಅಲ್ಲದೇ ತಮ್ಮ ತಂಡದ ಸದಸ್ಯ ಜಯಶ್ರೀ ಕೇಲ್ಕರ್ ಅವರನ್ನು ಕರೆದು ನನಗೆ ಹೊಡೆಯುವಂತೆ ಹೇಳಿದ್ದರು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

 

ಸದ್ಯಕ್ಕೆ ಪೊಲೀಸರು ಗಂಭೀರವಲ್ಲದ ಅಪರಾಧ (ಎನ್‍ಸಿ) ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ ಅವರು ಗಣೇಶ್ ಆಚಾರ್ಯ ವಿರುದ್ಧ ಕಿಡಿ ಕಾರಿದ್ದರು. ನೃತ್ಯಗಾರರನ್ನು ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಬಹಿರಂಗವಾಗಿ ಆರೋಪಿಸಿದ್ದರು.

ಗಣೇಶ್ ಆಚಾರ್ಯ ಅವರು ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾದ ಹಿಂದಿ ‘ಗಲಿ ಗಲಿ ಮೇ’ ಹಾಡು, ಅಲ್ಲದೇ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರದ ಇಂಟ್ರೋ ಹಾಡಿಗೆ ಗಣೇಶ್ ನೃತ್ಯ ಸಂಯೋಜನ ಮಾಡಿದ್ದಾರೆ.

Vishwa News 24

Recent Posts

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

3 minutes ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

10 minutes ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

32 minutes ago

ಉಡುಪಿ:  ನೇರ ಸಂದರ್ಶನ – vishwanews24

ಉಡುಪಿ:  ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ  ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…

44 minutes ago

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

19 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

19 hours ago