ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿ ಪರಾರಿ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಳ್ಳತನದ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿಯೊಬ್ಬ ಜಿಲ್ಲಾ ಕಾರಾಗೃಹ ಆವರಣದಿಂದ ಪರಾರಿಯಾದ ಘಟನೆ ನಡೆದಿದೆ.

ಮಹಮ್ಮದ್ ರಫೀಕ್ ಪರಾರಿಯಾದ ಕೈದಿ. ಈತ ಕೈದಿ ಬೆಂಗಾವಲು ಸಮಯ ಮಂಗಳೂರು ಜೈಲು ಸಮೀಪ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ ಎಂದು ತಿಳಿದು ಬಂದಿರುತ್ತದೆ.

ಮುಹಮ್ಮದ್ ರಫೀಕ್‌ ವಿರುದ್ಧದ ಪ್ರಕರಣ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಇಬ್ಬರು ಪೊಲೀಸರು ಆತನನ್ನು ಬಸ್ ಮೂಲಕ ಕರೆದೊಯ್ದು, ವಿಚಾರಣೆ ಮುಗಿಸಿ ಮಂಗಳೂರಿಗೆ ಬಂದಿದ್ದರು. ಪಿವಿಎಸ್ ವೃತ್ತದ ಬಳಿ ಬಸ್‌ನಿಂದ ಇಳಿದು ಉಪಕಾರಾಗೃಹದತ್ತ ನಡೆದುಕೊಂಡು ಬರುತ್ತಿದ್ದಾಗ ಕಾಂಪ್ಲೆಕ್ಸ್‌ವೊಂದರ ಎದುರು ಪೊಲೀಸರನ್ನು ತಳ್ಳಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.