Featured

ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ : ಆರಗಜ್ಞಾನೇಂದ್ರ ಆದೇಶ  – Vishwanews24

ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ : ಆರಗಜ್ಞಾನೇಂದ್ರ ಆದೇಶ  – Vishwanews24

ಬೆಂಗಳೂರು : ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ಕೆಲಸ ಮಾಡುವ ಪೊಲೀಸರು ತಮ್ಮ ದೇಹಗಳಿಗೆ ಕ್ಯಾಮರ ಅಳವಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನ ಪರಿಷತ್ ನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಬಾಲಕೃಷ್ಣರಾವ್ ವರದಿ ಪ್ರಕಾರ ಪೊಲೀಸ್ ನೇಮಕಾತಿ ನಡೆಯುತ್ತಿದೆಯೇ ಎಂದಾಗ ಉತ್ತರ ನೀಡಿದ ಸಚಿವರು, 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6.10 ಕೋಟಿ ಜನಸಂಖ್ಯೆ ಇದೆ. ಒಟ್ಟು 1,05,864 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿದ್ದಾರೆ.

ದೇಶದಲ್ಲಿ 568 ಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ ಇದ್ದರೆ, ರಾಜ್ಯದಲ್ಲಿ 577 ಜನರಿಗೆ ಒಬ್ಬ ಪೊಲೀಸ್ ಸಿಬ್ಬಂದಿ ಇದ್ದಾರೆ ಎಂದರು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಹೋದಾಗ ಒರಟಾಗಿ ವರ್ತಿಸುತ್ತಾರೆ. ದರ್ಪ ಪ್ರದರ್ಶಿಸುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತವೆ. ಅದನ್ನು ತಪ್ಪಿಸಲು ಇನ್ನೂ ಮುಂದೆ ಅಪರಾಧ ನಡೆದಾಗ ಸ್ಥಳಕ್ಕೆ ತೆರಳುವ ಪೊಲೀಸ್ ರು ಬಾಡಿ ಕ್ಯಾಮರಾ ಹೊಂದಿರುವುದು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ.

ಸಂಚಾರಿ ಪೊಲೀಸರು ಬಾಡಿ ಕ್ಯಾಮರ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿದಂತೆ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರು ಬಾಡಿ ಕ್ಯಾಮರ ಅಳವಡಿಕೊಳ್ಳಬೇಕಿದೆ. ಯಾರಾದರೂ ಬಾಡಿ ಕ್ಯಾಮರ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಟ್ರಾಫಿಕ್ ಪೋ ಲಿಸರ ಜವಾಬ್ದಾರಿಯೂ ಹೆಚ್ಚಾಗಿದೆ. ವ್ಯವಸ್ಥೆಯನ್ನು ಸುಧಾರಿಸುತ್ತಿದ್ದೇವೆ. ಆಕ್ಷೇಪಕ್ಕೆ ಗುರಿಯಾಗಿದ್ದ ಟೋಯಿಂಗ್ ನ್ನು ಸದ್ಯಕ್ಕೆ ನಿಲ್ಲಿಸಿದ್ದೇವೆ. ಮುಂದೆ ಅದನ್ನು ಬದಲಾವಣೆ ಮಾಡಲು ಹಿರಿಯ ಅಧಿಕಾರಿಗಳು ಚರ್ಚೆ ಮಾಡುತ್ತಿದ್ದಾರೆ.

ಮುಖ್ಯಮಂತ್ರಿಯವರ ಜೊತೆ ಚರ್ಚೆ ಮಾಡಿ ಅತ್ಯಾಧುನಿಕ ಜನ ಸ್ನೇಹಿ ಟ್ರಾಫಿಕ್ ವ್ಯವಸ್ಥೆ ತರಲು ಚಿಂತನೆ ನಡೆದಿದೆ. ಇನ್ನೂ ಮುಂದೆ ರಸ್ತೆಯಲ್ಲಿ ಅಡ್ಡ ಹಾಕಿ ನಿಲ್ಲಿಸಿ ತಪಾಸಣೆ ಮಾಡುವುದು, ಕಿರುಕುಳ ನೀಡುವುದು ತಪ್ಪಲಿದೆ ಎಂದರು. ಸ್ಮಾರ್ಟ್ ಸಿಟಿ ಯೋಜನೆಯ ಅನುದಾನ ಬಳಕೆ ಮಾಡಿ ನಗರ ಪ್ರದೇಶದಲ್ಲಿ ಅತ್ಯಾಧುನಿಕ ಕ್ಯಾಮರಗಳನ್ನು ಅಳವಡಿಸಿದ್ದೇವೆ, ಇವು ಕಳ್ಳತನದ ವಾಹನಗಳು ಹಾದು ಹೋದರೆ ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡುತ್ತವೆ ಎಂದು ಹೇಳಿದರು. ಐದು ವರ್ಷಗಳ ಹಿಂದೆ ಪೊಲೀಸ್ ಇಲಾಖೆಯಲ್ಲಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago