Featured

ಪೊಲೀಸರು ಮುಕ್ತವಾಗಿ ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರದಿಂದ ಸಂಪೂರ್ಣ ಸಹಕಾರ : cm ಸಿದ್ದರಾಮಯ್ಯ – vishwanews24

ಪೊಲೀಸರು ಮುಕ್ತವಾಗಿ ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರದಿಂದ ಸಂಪೂರ್ಣ ಸಹಕಾರ : cm ಸಿದ್ದರಾಮಯ್ಯ

ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಅಧಿಕಾರಿಗಳ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿಯಾಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದರು.

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು. ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.

ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಗೃಹ ಸಚಿವ ಜಿ.ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅತೀಕ್ ಎಲ್.ಕೆ., ಗೃಹ ಕಾರ್ಯದರ್ಶಿ ಉಮಾಶಂಕರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago