ಮಂಗಳೂರು: ಜಿಲ್ಲೆಯಲ್ಲಿ ಸಮಾಜದ್ರೋಹಿ ಶಕ್ತಿಗಳು ಹೆಚ್ಚಾಗುತ್ತಿದೆ. ಕಾನೂನಿನ ಭಯವಿಲ್ಲದೇ ರೌಡಿಗಳು ಅಟ್ಟಹಾಸ ತೋರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾತಾನಾಡಿದ ಅವರು, ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದರು. ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಾಹಕವಾಗಿದೆ. ಪೊಲೀಸರು ರಾಜಕೀಯ ಬಾಸ್ ಗಳ ಮಾತುಗಳಿಗೆ ಗೌರವ ಕೊಡಬಾರದು. ಕಾನೂನುಗಳಿಗೆ ಪೊಲೀಸರು ಗೌರವ ಕೊಡಬೇಕು ಎಂದರು.
ಮಂಗಳೂರು : ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ : ನಳೀನ್ ಕುಮಾರ್ ಕಟೀಲ್ -Vishwanews24
ರೌಡಿಗಳ ಹಾಗೆ ಯಾರ್ಯಾರ ಮಕ್ಕಳಿಗೆ ಸಂಬಂದ ಇಲ್ಲದವರು ಹೊಡೆಯುತ್ತಿದ್ದಾರೆ. ಪೊಲೀಸ್ ಇಲಾಖೆಯ ಮುಂದೆಯೇ ಹೊಡಿಯುತ್ತಾರೆ. ಪೊಲೀಸರು ಹೊಡಿಬೇಡಿ ಎಂದು ಅಂಗಲಾಚುವ ವಿಡಿಯೋ ವೈರಲ್ ಆಗುತ್ತಿದೆ. ಪೊಲೀಸ್ ಇಲಾಖೆಯ ಲಾಠಿ ಎಲ್ಲಿ ಹೋಯಿತು? ಪೊಲೀಸ್ ಇಲಾಖೆ ದಾಳಿ ಮಾಡಿದವರ ಮೇಲೆ ಯಾವ ಕೇಸ್ ಹಾಕಿದೆ? ಯಾರೋ ಒಬ್ಬ ರೌಡಿ ರೋಡಲ್ಲಿ ಹೊಡಿತಾರೆ ಅಂದ್ರೆ ಯಾರಾದ್ರೂ ತಮ್ಮ ಮಕ್ಕಳನ್ನು ಶಿಕ್ಷಣಕ್ಕಾಗಿ ಮಂಗಳೂರಿಗೆ ಕಳುಹಿಸುತ್ತಾರಾ? ಎಂದು ಪ್ರಶ್ನಿಸಿದರು.
ಆತ್ಮವಿಶ್ವಾಸ ಧೈರ್ಯ ತುಂಬುವ ಕೆಲಸ ಪೊಲೀಸರು ಮಾಡಬೇಕಿತ್ತು. ಆದ್ರೆ ಆರೋಪಿಗಳು ಬೆಳಗ್ಗೆ ಹೋಗಿ ಸಂಜೆ ಜಾಮೀನಿನ ಮೇಲೆ ಹೊರಗೆ ಬರ್ತಾರೆ ಅಂದ್ರೆ ಈ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ರೌಡಿಗಳಿಗೆ, ಸಮಾಜದ್ರೋಹಿ ಶಕ್ತಿಗಳಿಗೆ ತಕ್ಕ ಶಾಸ್ತಿ ಮಾಡಬೇಕು. ಯಾವುದೇ ಧರ್ಮದವರಾದ್ರೂ ತಪ್ಪು ಮಾಡಿದರೆ ಅವರಿಗೆ ತಕ್ಕ ಶಿಕ್ಷೆ ಆಗಬೇಕೆಂದರು.
ಬೆಳ್ತಂಗಡಿ : ಎಂ.ಕಾಂ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ -Vishwanews24
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…