ಬೆಂಗಳೂರು: ವಿಕ್ರಂ ಗೌಡ ಎನ್ಕೌಂಟರ್ ವಿಚಾರದಲ್ಲಿ ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಗೃಹ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಎನ್ಕೌಂಟರ್ ಬಗ್ಗೆ ಕೆಲ ಎಡಪಂಥೀಯರು ಅನುಮಾನ ವಿಚಾರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ ವಿಕ್ರಮ್ ಗೌಡ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು. ವಿಕ್ರಮ್ ಮೇಲೆ ಕೊಲೆ ಆರೋಪ ಸೇರಿ 60 ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು. ಹೀಗಾಗಿ ಎನ್ಕೌಂಟರ್ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ ಎಂದರು.
ಕಾಂಗ್ರೆಸ್ ಬಂದ ಮೇಲೆ ನಕ್ಸಲ್ ಚಟುವಟಿಕೆ ಜಾಸ್ತಿಯಾಗಿದೆ ಎಂಬ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ, ನಕ್ಸಲ್ ನಿಗ್ರಹ ಪಡೆಯ ಕೇಂದ್ರ ಸ್ಥಳ ಕಾರ್ಕಳದಲ್ಲೇ ಇದೆ. ನಕ್ಸಲ್ ನಿಗ್ರಹ ದಳ ಸತತವಾಗಿ ನಕ್ಸಲರ ಚಟುವಟಿಕೆ ಮೇಲೆ ನಿಗಾ ಇಟ್ಟುಕೊಂಡೇ ಬಂದಿತ್ತು. ಆದರೆ ಕಳೆದ 15 ದಿನಗಳ ಹಿಂದೆ ನಕ್ಸಲ್ ಮುಖಂಡರಾದ ಲತಾ ಹಾಗೂ ರಾಜು ಕಾಣಿಸಿಕೊಂಡರು. ಆಗ ಕೂಂಬಿಂಗ್ ಮಾಡುವುದಕ್ಕೆ ಶುರು ಮಾಡಿದರು ಎಂದು ತಿಳಿಸಿದರು.
ಈ ಮಧ್ಯೆ ವಿಕ್ರಮ್ ಗೌಡ ತಂಡದಲ್ಲಿ ಇರುವ ಬಗ್ಗೆ ಮಾಹಿತಿ ಸಿಕ್ಕಿತು. ವಿಕ್ರಮ್ ಗೌಡನನ್ನು ಹಾಗೇ ಬಿಟ್ಟುಕೊಂಡು ಅವರು ಏನು ಮಾಡಿದರೂ ಸರಿ ಎನ್ನುವ ಪರಿಸ್ಥಿತಿ ಇರಲಿಲ್ಲ. ಅದಕ್ಕಾಗಿ ಎನ್ಕೌಂಟರ್ ಮಾಡಲಾಗಿದೆ. ಈ ಎನ್ಕೌಂಟರ್ ಮೇಲೆ ತನಿಖೆ ಆಗಬೇಕು ಅಂತ ಕೆಲವರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಮಷಿನ್ ಗನ್ ಇಟ್ಟುಕೊಂಡಿದ್ದ 60 ಪ್ರಕರಣ ಇರುವ ವಿಕ್ರಮ್ ಗೌಡ ಎನ್ಕೌಂಟರ್ ಬಗ್ಗೆ ಯಾವ ದೃಷ್ಟಿಯಿಂದ ತನಿಖೆ ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು.
ನಾವು ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಇಲ್ಲಿ ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಇಲ್ಲಿ ಬರಲ್ಲ, ಸುರಕ್ಷತೆ ಮುಖ್ಯ. ಈ ಹಿಂದೆಯೇ ಆತನಿಗೆ ಶರಣಾಗುವಂತೆ ಸೂಚಿಸಲಾಗಿತ್ತು. ಆದರೆ ಶರಣಾಗಿರಲಿಲ್ಲ ಎಂದು ಪರಮೇಶ್ವರ್ ಹೇಳಿದರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…