ಬೆಂಗಳೂರು: ವಿಕ್ರಂ ಗೌಡ ಎನ್ಕೌಂಟರ್ ವಿಚಾರದಲ್ಲಿ ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಗೃಹ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಎನ್ಕೌಂಟರ್ ಬಗ್ಗೆ ಕೆಲ ಎಡಪಂಥೀಯರು ಅನುಮಾನ ವಿಚಾರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ ವಿಕ್ರಮ್ ಗೌಡ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು. ವಿಕ್ರಮ್ ಮೇಲೆ ಕೊಲೆ ಆರೋಪ ಸೇರಿ 60 ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು. ಹೀಗಾಗಿ ಎನ್ಕೌಂಟರ್ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ ಎಂದರು.
ಕಾಂಗ್ರೆಸ್ ಬಂದ ಮೇಲೆ ನಕ್ಸಲ್ ಚಟುವಟಿಕೆ ಜಾಸ್ತಿಯಾಗಿದೆ ಎಂಬ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ, ನಕ್ಸಲ್ ನಿಗ್ರಹ ಪಡೆಯ ಕೇಂದ್ರ ಸ್ಥಳ ಕಾರ್ಕಳದಲ್ಲೇ ಇದೆ. ನಕ್ಸಲ್ ನಿಗ್ರಹ ದಳ ಸತತವಾಗಿ ನಕ್ಸಲರ ಚಟುವಟಿಕೆ ಮೇಲೆ ನಿಗಾ ಇಟ್ಟುಕೊಂಡೇ ಬಂದಿತ್ತು. ಆದರೆ ಕಳೆದ 15 ದಿನಗಳ ಹಿಂದೆ ನಕ್ಸಲ್ ಮುಖಂಡರಾದ ಲತಾ ಹಾಗೂ ರಾಜು ಕಾಣಿಸಿಕೊಂಡರು. ಆಗ ಕೂಂಬಿಂಗ್ ಮಾಡುವುದಕ್ಕೆ ಶುರು ಮಾಡಿದರು ಎಂದು ತಿಳಿಸಿದರು.
ಈ ಮಧ್ಯೆ ವಿಕ್ರಮ್ ಗೌಡ ತಂಡದಲ್ಲಿ ಇರುವ ಬಗ್ಗೆ ಮಾಹಿತಿ ಸಿಕ್ಕಿತು. ವಿಕ್ರಮ್ ಗೌಡನನ್ನು ಹಾಗೇ ಬಿಟ್ಟುಕೊಂಡು ಅವರು ಏನು ಮಾಡಿದರೂ ಸರಿ ಎನ್ನುವ ಪರಿಸ್ಥಿತಿ ಇರಲಿಲ್ಲ. ಅದಕ್ಕಾಗಿ ಎನ್ಕೌಂಟರ್ ಮಾಡಲಾಗಿದೆ. ಈ ಎನ್ಕೌಂಟರ್ ಮೇಲೆ ತನಿಖೆ ಆಗಬೇಕು ಅಂತ ಕೆಲವರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಮಷಿನ್ ಗನ್ ಇಟ್ಟುಕೊಂಡಿದ್ದ 60 ಪ್ರಕರಣ ಇರುವ ವಿಕ್ರಮ್ ಗೌಡ ಎನ್ಕೌಂಟರ್ ಬಗ್ಗೆ ಯಾವ ದೃಷ್ಟಿಯಿಂದ ತನಿಖೆ ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು.
ನಾವು ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಇಲ್ಲಿ ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಇಲ್ಲಿ ಬರಲ್ಲ, ಸುರಕ್ಷತೆ ಮುಖ್ಯ. ಈ ಹಿಂದೆಯೇ ಆತನಿಗೆ ಶರಣಾಗುವಂತೆ ಸೂಚಿಸಲಾಗಿತ್ತು. ಆದರೆ ಶರಣಾಗಿರಲಿಲ್ಲ ಎಂದು ಪರಮೇಶ್ವರ್ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…