Featured

ಪೊಲೀಸರ ಕೈ ಸೇರಿದ ಶಿರೂರು ಶ್ರೀ ಪೋಸ್ಟ್ ಮಾರ್ಟಮ್ ರಿಪೋರ್ಟ್

ಉಡುಪಿ: ಶಿರೂರು ಲಕ್ಷ್ಮೀವರ ತೀರ್ಥ ಶ್ರೀಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರಿಗೆ ಲಭ್ಯವಾಗಿದೆ. ಕೆಎಂಸಿಯ ವೈದ್ಯರು ಎಂಟು ಪುಟಗಳ ಪೋಸ್ಟ್ ಮಾರ್ಟಮ್ ವರದಿಯನ್ನು ಪೊಲೀಸರಿಗೆ ನೀಡಿದ್ದಾರೆ.

ಸಾವಿಗೆ ಸಂಬಂಧಿಸಿದ ಮಾಹಿತಿಗಳು ಅದರಲ್ಲಿದ್ದರೂ, ಸಾವಿಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವೇ ಎರಡು ವರದಿಗಳನ್ನು ತಾಳೆ ಮಾಡಿ ನೋಡಲಾಗುತ್ತದೆ. ಈಗಿನ ವರದಿಯಲ್ಲಿ ಶರೀರದಲ್ಲಿ ಎಲ್ಲೆಲ್ಲಿ ರಕ್ತಸ್ರಾವವಾಗಿತ್ತು, ಅಲ್ಲಿಯವರೆಗೆ ಆರೋಗ್ಯ ಸ್ಥಿತಿ ಹೇಗಿತ್ತು ಎಂಬ ವಿವರಗಳಿವೆ.

ಶ್ರೀಗಳ ಸಾವಿಗೆ ಕಾರಣವೇನು ಎಂಬುದು ಗೊತ್ತಾಗಲು ಎಫ್.ಎಸ್.ಎಲ್ ವರದಿಗಾಗಿ ಕಾಯಲೇಬೇಕು. ಸದ್ಯಕ್ಕೆ ಕೆಂಎಂಸಿ ವೈದ್ಯರು ಮತ್ತು ಪೊಲೀಸರಿಗೆ ಸಾವಿಗೆ ಕಾರಣವಾದ ಅಂಶ ಏನು ಎಂದು ಗೊತ್ತಾಗಿದ್ದರೂ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವೇ ಅದನ್ನು ಬಹಿರಂಗಪಡಿಸಲಾಗುತ್ತದೆ. ಎಫ್ ಎಸ್ ಎಲ್ ವರದಿ ಬರಲು ಆರು ವಾರಗಳು ಬೇಕಾಗಬಹುದು ಎಂದು ಕೆಎಂಸಿ ವೈದ್ಯರು ಮಾಹಿತಿ ನೀಡಿದ್ದಾರೆ.

ಸ್ವಾಮೀಜಿಗಳ ಲಿವರ್, ಅನ್ನನಾಳ, ಕಿಡ್ನಿ ಸಂಪೂರ್ಣ ಕ್ಷೀಣಿಸಿದ್ದು ಕೆಲಸ ಮಾಡುತ್ತಿರಲಿಲ್ಲ ಎಂದು ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದಾರೆ.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago