ಉಡುಪಿ: ಶಿರೂರು ಲಕ್ಷ್ಮೀವರ ತೀರ್ಥ ಶ್ರೀಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರಿಗೆ ಲಭ್ಯವಾಗಿದೆ. ಕೆಎಂಸಿಯ ವೈದ್ಯರು ಎಂಟು ಪುಟಗಳ ಪೋಸ್ಟ್ ಮಾರ್ಟಮ್ ವರದಿಯನ್ನು ಪೊಲೀಸರಿಗೆ ನೀಡಿದ್ದಾರೆ.
ಸಾವಿಗೆ ಸಂಬಂಧಿಸಿದ ಮಾಹಿತಿಗಳು ಅದರಲ್ಲಿದ್ದರೂ, ಸಾವಿಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವೇ ಎರಡು ವರದಿಗಳನ್ನು ತಾಳೆ ಮಾಡಿ ನೋಡಲಾಗುತ್ತದೆ. ಈಗಿನ ವರದಿಯಲ್ಲಿ ಶರೀರದಲ್ಲಿ ಎಲ್ಲೆಲ್ಲಿ ರಕ್ತಸ್ರಾವವಾಗಿತ್ತು, ಅಲ್ಲಿಯವರೆಗೆ ಆರೋಗ್ಯ ಸ್ಥಿತಿ ಹೇಗಿತ್ತು ಎಂಬ ವಿವರಗಳಿವೆ.
ಶ್ರೀಗಳ ಸಾವಿಗೆ ಕಾರಣವೇನು ಎಂಬುದು ಗೊತ್ತಾಗಲು ಎಫ್.ಎಸ್.ಎಲ್ ವರದಿಗಾಗಿ ಕಾಯಲೇಬೇಕು. ಸದ್ಯಕ್ಕೆ ಕೆಂಎಂಸಿ ವೈದ್ಯರು ಮತ್ತು ಪೊಲೀಸರಿಗೆ ಸಾವಿಗೆ ಕಾರಣವಾದ ಅಂಶ ಏನು ಎಂದು ಗೊತ್ತಾಗಿದ್ದರೂ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವೇ ಅದನ್ನು ಬಹಿರಂಗಪಡಿಸಲಾಗುತ್ತದೆ. ಎಫ್ ಎಸ್ ಎಲ್ ವರದಿ ಬರಲು ಆರು ವಾರಗಳು ಬೇಕಾಗಬಹುದು ಎಂದು ಕೆಎಂಸಿ ವೈದ್ಯರು ಮಾಹಿತಿ ನೀಡಿದ್ದಾರೆ.
ಸ್ವಾಮೀಜಿಗಳ ಲಿವರ್, ಅನ್ನನಾಳ, ಕಿಡ್ನಿ ಸಂಪೂರ್ಣ ಕ್ಷೀಣಿಸಿದ್ದು ಕೆಲಸ ಮಾಡುತ್ತಿರಲಿಲ್ಲ ಎಂದು ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದಾರೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…