ಮಂಗಳೂರು: ಕೆಲವು ದಿನಗಳ ಹಿಂದೆ ನಗರದಲ್ಲಿ ಪೊಲೀಸರ ಕೊಲೆಗೆ ಯತ್ನ ನಡೆದಿದ್ದು, ಈ ಘಟನೆಯ ಹಿಂದೆ ಪಿಎಫ್ಐ ಹಾಗೂ ಎಸ್ಡಿಪಿಐ ಕೈವಾಡ ಇರುವುದಾಗಿ ಆರೋಪ ಮಾಡಲಾಗಿದೆ.
ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ವಿಶ್ವ ಹಿಂದೂಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರು, “ನಗರದಲ್ಲಿ 2019ರ ಡಿಸೆಂಬರ್ನಲ್ಲಿ ನಡೆದ ಗೋಲಿಬಾರ್ ಪ್ರಕರಣಕ್ಕೆ ಪ್ರತೀಕಾರ ತೀರಿಸಲು ಪೊಲೀಸರ ಕೊಲೆಗೆ ಯತ್ನಿಸಿದ್ದು ಎಸ್ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರು. ಬಂಧಿತ ಆರೋಪಿಗಳೆಲ್ಲರೂ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗೆ ಸೇರಿದವರಾಗಿದ್ದಾರೆ” ಎಂದು ಹೇಳಿದ್ದಾರೆ.
ಶಿವಮೊಗ್ಗ: ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು
“ಕುದ್ರೋಳಿಯ ನಾಲ್ಕು ಮಂದಿ, ಬಜ್ಪೆ ಹಾಗೂ ಬಂಟ್ವಾಳದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂರು ಸ್ಥಳಗಳೂ ಕೂಡಾ ಪಿಎಫ್ಐ ಹಾಗೂ ಎಸ್ಡಿಪಿಐ ಕೇಂದ್ರಗಳಾಗಿವೆ. ಬಂಟ್ವಾಳ ಅವರ ಮೂಲ ಕೇಂದ್ರವಾದ ಕಾರಣದಿಂದ ಇದು ಯೋಜಿತ ದಾಳಿಯಾಗಿದೆ. ಈ ಕೃತ್ಯಕ್ಕೆ ಪಿಎಫ್ಐ ಸಣ್ಣ ಯುವಕರನ್ನು ಬಳಸಿಕೊಂಡಿದೆ. ನೈಟ್ ರೇವಟ್ ಮಾತ್ರೆಯನ್ನು ಈ ಯುವಕರಿಗೆ ಕೊಡಲಾಗಿದ್ದು, ಮಾಯಾ ಗ್ಯಾಂಗ್ ಎನ್ನುವ ಹೆಸರಿನಲ್ಲಿ ಈ ಕೃತ್ಯವೆಸಗಿದ್ದಾರೆ” ಎಂದಿದ್ದಾರೆ.
“ಪೊಲೀಸರನ್ನು ಹತ್ಯೆಗೈಯಲು ವ್ಯವಸ್ಥಿತವಾದ ಯೋಜನೆ ಮಾಡಲಾಗಿದೆ. ಆದ್ದರಿಂದ ಪೊಲೀಸ್ ಇಲಾಖೆ ಈ ವಿಷಯದ ಬಗ್ಗೆ ಆಳವಾದ ತನಿಖೆ ನಡೆಸಬೇಕಾಗಿದೆ. ಈ ಕೃತ್ಯಕ್ಕೆ ಆರ್ಥಿಕ ಹಾಗೂ ಆಶ್ರಯ ನೀಡಿದವರನ್ನು ಕೂಡಾ ಬಂಧಿಸಬೇಕು. ಇದರಲ್ಲಿ ದ.ಕ ಜಿಲ್ಲೆಯ ಎಸ್ಡಿಪಿಐ ಹಾಗೂ ಪಿಎಫ್ಐ ನಾಯಕರ ಶೇ.100ರಷ್ಟು ಕೈವಾಡವಿದೆ. ಅವರ ಸೂಚನೆಯಿಲ್ಲದೆ ಈ ಕೃತ್ಯ ನಡೆಸುವುದು ಅಸಾಧ್ಯ. ಎಸ್ಡಿಪಿಐ ಹಾಗೂ ಪಿಎಫ್ಐ ನಾಯಕರನ್ನು ಕೂಡಲೇ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…