ಬೆಂಗಳೂರು: ಕಾಂಗ್ರೆಸ್ ನಾಯಕರು ತಮ್ಮ ಹಣದಲ್ಲಿ ಜನರಿಗೆ ಸಹಾಯ ಮಾಡಲು ಹೋದರೆ ಪೊಲೀಸ್ ಅಧಿಕಾರಿಗಳು ಈ ಬೋರ್ಡ್ ಗಳನ್ನು ಕಿತ್ತು ಹಾಕಿಸಿದ್ದಾರೆ. ಪಾಪ ಆ ಪೊಲೀಸ್ ಅವರಿಗೆ ನಮ್ಮ ಸಹವಾಸ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ಮಹದೇವಪುರ ಹಾಗೂ ಕೆ.ಆರ್. ಪುರ ವಿಧಾನಸಭೆ ಕ್ಷೇತ್ರದಲ್ಲಿ ರವಿವಾರ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ನೆರವು ವಿತರಣೆ ಕಾರ್ಯಕ್ರಮ ನಿಲ್ಲಿಸಿದರೆ ಜನರನ್ನು ಕರೆದುಕೊಂಡು ಬಂದು ನಿಮ್ಮ ಪೊಲೀಸ್ ಠಾಣೆ ಮುಂದೆ ಧರಣಿ ಮಾಡುತ್ತೇನೆ ಎಂದು ಹೇಳಿದೆ. ನಾವು ನ್ಯಾಯಾಲಯಕ್ಕೆ ಗೌರವ ಕೊಡುತ್ತೇವೆ. ಆದರೆ ನಿಮ್ಮ ಕೇಸ್ ಗಳಿಗೆ ಹೆದರುವ ಮಕ್ಕಳು ಕಾಂಗ್ರೆಸ್ ನವರಲ್ಲ. ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿಯ ಬ್ಯಾಡ್ಜ್ ಮತ್ತು ಬಾವುಟ ಕೊಡಿ. ಅವರು ತಮ್ಮ ಸ್ಟಾರ್ ತೆಗೆದು ಬಿಜೆಪಿ ಬ್ಯಾಡ್ಜ್ ಹಾಕಿಕೊಳ್ಳಲಿ ಎಂದು ಕಿಡಿಕಾರಿದರು.
ನಿಮ್ಮ ಕೈಯಲ್ಲಿ ಬಡವರಿಗೆ ನೆರವಾಗಲು ಸಾಧ್ಯವಾದರೆ ನೆರವಾಗಿ. ಅದನ್ನು ಬಿಟ್ಟು ಕಷ್ಟದ ಸಮಯದಲ್ಲಿ ಬಡವರಿಗೆ ನೆರವಾಗುವುದನ್ನು ತಡೆಯುತ್ತೀರಲ್ಲ ನೀವು ಮನುಷ್ಯರಾ ಅಥವಾ ದನಗಳಾ? ಮಂತ್ರಿ, ಶಾಸಕ ಹೇಳಿದ ಮಾತ್ರಕ್ಕೆ ಕಾಂಗ್ರೆಸ್ ಬಾವುಟ ಕಿತ್ತು ಹಾಕಲು ಬಂದಿದ್ದೀರಾ. ಕಾಂಗ್ರೆಸ್ ಬಾವುಟ ಕಿತ್ತು ಹಾಕಲು ಅವರ ಹಣೆಯಲ್ಲಿ ಬರೆದಿಲ್ಲ ಎಂದು ಡಿಕೆಶಿ ಗುಡುಗಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…