ಮಂಗಳೂರು : ‘ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿ ಸುಳ್ಳು ಕೇಸು ಹಾಕುತ್ತಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಅವರು ಎಸ್ಡಿಪಿಐ ಕಚೇರಿಗೆ ದಾಳಿ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದ್ದರೂ ಜಿಲ್ಲೆಯಲ್ಲಿ ಪೊಲೀಸ್ ಕಮಿಷನರ್ ಮುಂದಿಟ್ಟುಕೊಂಡು ನಿರಂತರ ದಾಳಿ ಆಗುತ್ತಿದೆ.
ಇವರಿಗೆ ನಿರ್ದೇಶನ ನೀಡಿದವರು ಯಾರು..? ಇಡೀ ದೇಶದಲ್ಲಿ ದ.ಕ ಜಿಲ್ಲೆಯಲ್ಲಿ ಮಾತ್ರ ಇಂತಹ ದಾಳಿಗಳು ಯಾಕೆ ಆಗುತ್ತಿದೆ. ಹಾಗಾದರೆ ಕಮಿಷನರ್ ಕೇವಲ ಇದನ್ನು ಫೇಮಸ್ ಆಗೋಕೆ ಮಾಡ್ತಿದ್ದಾರಾ? ರಾಜಕೀಯ ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಹೀಗೆ ಮಾಡ್ತಿದ್ದಾರಾ? ಕೂತರೂ ನಿಂತರೂ ಪ್ರೆಸ್ಮೀಟ್ ಮಾಡುವ ಕಮಿಷನರ್ ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ. ಎಸ್ಡಿಪಿಐ ನ್ನು ರಾಜಕೀಯವಾಗಿ ಎದುರಿಸಲು ನಿಮಗೆ ಧಮ್ ಇಲ್ಲವಾ?’ ಎಂದು ರಾಜ್ಯ ಸಮಿತಿ ಮಾಧ್ಯಮ ಸಂಯೋಜಕ ರಿಯಾಝ್ ಕಡಂಬು ಪ್ರಶ್ನಿಸಿದರು.
ಪದೇ ಪದೇ ದಾಳಿ ಹಾಗೂ ಸಂಘಟನೆಗಳ ಕಚೇರಿಯನ್ನು ಮುಚ್ಚುತ್ತಿರುವ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ‘ಕಚೇರಿಗೆ ಬೀಗ ಹಾಕುವುದು , ರಾತ್ರಿ ವೇಳೆ ದಾಳಿ ಏಕೆ..? ಅಮಾಯಕರನ್ನು ಬಂಧಿಸಲಾಗುತ್ತದೆ. ನಮ್ಮದು ರಾಜಕೀಯ ಪಕ್ಷ. ನಮ್ಮ ಸಂಘಟನೆಯ ಸದುದ್ದೇಶ ಜನರಿಗೆ ತಿಳಿದಿರುವುದರಿಂದ ದಲಿತರು, ಕ್ರೈಸ್ತರು ಎಲ್ಲರೂ ನಮ್ಮ ಸಂಘಟನೆಗೆ ಸೇರುತ್ತಿದ್ದಾರೆ. ಇದನ್ನು ನೋಡಿ ಸಹಿಸಲಾಗದ ಬಿಜೆಪಿ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣಾ ಆಯೋಗವೇ ನಮ್ಮ ಎಸ್ಡಿಪಿಐ ಸಂಘಟನೆ ಸಂವಿಧಾನ ತತ್ವಗಳ ಮೂಲಕ ಕೆಲಸ ಮಾಡುತ್ತಿದೆ ಎಂದು ಕ್ಲೀನ್ಚಿಟ್ ಕೊಟ್ಟಿರುವಾಗ ದ.ಕ ಜಿಲ್ಲೆಯಲ್ಲಿ ಮಾತ್ರ ಯಾಕೆ ಇಂತಹ ಪ್ರಕ್ರಿಯೆಗಳು ನಡೆಯುತ್ತಿದೆ’ ಎಂದು ಹೇಳಿದರು.
ಮಂಗಳೂರು: ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…