Featured

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಪೊಲೀಸ್ ಕಾನ್ಸ್‌ಸ್ಟೇಬಲ್ ಪರೀಕ್ಷೆಗೆ ಸರ್ಕಾರ ಸಜ್ಜಾಗಿದೆ. ಆಗಸ್ಟ್ 2ರಂದು ರಾಜ್ಯದಲ್ಲಿ ಪೊಲೀಸ್ ಪೇದೆ ಲಿಖಿತ ಪರೀಕ್ಷೆ ನಡೆಯಲಿದೆ. ಈಗಾಗಲೇ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಯುವ ಸಮೂಹದ ಪ್ರತಿಭಟನೆಯಿಂದ ದೇಶದಲ್ಲೇ ಶಿಕ್ಷಣ ಹಾಗೂ ಪರೀಕ್ಷಾ ಸುಧಾರಣೆಗಳಿಗೆ ಒತ್ತಾಯ ಹೆಚ್ಚಾಗುತ್ತಿದೆ.

ಇದರ ಬೆನ್ನಲ್ಲೇ ರಾಜ್ಯದ ಕಾನ್ಸ್‌ಸ್ಟೇಬಲ್ ಪರೀಕ್ಷೆಯನ್ನು ಸೂಸೂತ್ರವಾಗಿ ನಡೆಸಲು ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಮುತುವರ್ಜಿ ವಹಿಸಿದ್ದಾರೆ. ಇದೇ ವೇಳೆ ಎದ್ದಿರುವ ಕೆಲ ಗೊಂದಲಗಳಿಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಪೈಕಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಕಾನ್ಸ್‌ಸ್ಟೇಬಲ್ ಲಿಖಿತ ಪರೀಕ್ಷೆಯಲ್ಲಿ ಹಿಜಾಬ್ ಹಾಕಲು ಅವಕಾಶವಿಲ್ಲ. ಧಾರ್ಮಿಕ ಉಡುಪುಗಳ ಬಗ್ಗೆ ಗೊಂದಲ ಆಗದಂತೆ ಮೊದಲೇ ನೋಡಿಕೊಳ್ಳಲಾಗುವುದು ಎಂದು ಪ್ರಿಯಾಂಕಾ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ವೇಳೆ ಯಾವ ಉಡುಪು ಹಾಕಬಹುದು..ಯಾವುದು ಹಾಕಬಾರದು ಅಂತ ಪ್ರವೇಶ ಪತ್ರದಲ್ಲಿ ಹಾಕಿರುತ್ತೇವೆ. ಹೀಗಾಗಿ ಪರೀಕ್ಷಾ ಕೊಠಡಿ ಬಳಿ ಯಾವುದೇ ಗೊಂದಲಕ್ಕೆ ಅವಕಾಶವಿರುವುದಿಲ್ಲ ಎಂದು ಪ್ರಿಯಾಂಕ ಖರ್ಗೆ ಸ್ಪಷ್ಟಪಡಿಸಿದ್ದಾರೆ.

24 ಗಂಟೆ ಮುಂಚೆ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸೇಶನ್ ಮಾಡಲಾಗುತ್ತದೆ. ಪರೀಕ್ಷಾ ರೂಮ್ ನಲ್ಲಿ ನಿಯೋಜಿತ ಸಿಬ್ಬಂದಿ ಸಹ ಮೊಬೈಲ್ ಬಳಕೆ ಮಾಡುವಂತಿಲ್ಲ. ಪರೀಕ್ಷೆ ಹಿನ್ನೆಲೆಯಲ್ಲಿ ಖಾಸಗಿ ತರಬೇತಿ ಸೆಂಟರ್ ಮೇಲೂ ನಿಗಾ ವಹಿಸುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಜನಿವಾರ, ಶಿವದಾರ, ಉಡದಾರ, ಮಾಂಗಲ್ಯ ಸರ, ಮುಗುತಿ, ಕುಂಕುಮ, ಉಂಗುರ, ತಾಯತಾ ಹಾಕುವುದು ಸೇರಿದಂತೆ ಎಲ್ಲಾ ವಸ್ತುಗಳ ಬಳಕೆ ಬಗ್ಗೆ ಮೊದಲೇ ತಿಳಿಸಲಾಗುವುದು. ಈ ಮೂಲಕ ಯಾವುದೇ ರೀತಿಯಲ್ಲಿ ಕೊನೆಕ್ಷಣದ ಗೊಂದಲಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲಾಗುವುದು. ಎರಡುವರೆ ಗಂಟೆ ಮುಂಚೆ ಬಂದು ಇವುಗಳನ್ನು ‌ಚೆಕ್ ಮಾಡಿಸಲು ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

23 minutes ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 hours ago

ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ : ರಾಜ್ಯ ಸರಕಾರ ಮಹತ್ವದ ನಿರ್ಧಾರ – vishwanews24

ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ : ರಾಜ್ಯ ಸರಕಾರ ಮಹತ್ವದ ನಿರ್ಧಾರ ಬೆಂಗಳೂರು: ವಿದ್ಯಾರ್ಥಿಗಳ…

2 hours ago