Featured

ಪೊಲೀಸ್ ಠಾಣೆ ಮುಂಭಾಗ ತಾಯಿಗೆ ಬೆಂಕಿ ಹಚ್ಚಿದ ಮಗ – vishwanews24

ಪೊಲೀಸ್ ಠಾಣೆ ಮುಂಭಾಗ ತಾಯಿಗೆ ಬೆಂಕಿ ಹಚ್ಚಿ ವಿಡಿಯೋ ರೆಕಾರ್ಡ್ ಮಾಡಿದ ಮಗ

ಅಲಿಘಡ:  ಮನೆಯಲ್ಲಿ ಪ್ರತಿ ದಿನ ಆಸ್ತಿಗಾಗಿ ಜಗಳ. ಹೀಗಾಗಿ ಪೊಲೀಸ್ ಠಾಣೆಗೆ ತಾಯಿ ಹಾಗೂ ಮಗ ಆಗಮಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಪೊಲೀಸ್ ಠಾಣೆಯಿಂದ ಹೊರಬದ ತಾಯಿ ಮಗ ವಾಗ್ವಾದ ನಡೆಸಿದ್ದಾರೆ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚುವ ಬೆದರಿಕೆ ಹಾಕಿದ ತಾಯಿಗೆ ಮನಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬಳಿಕ ಈ ವಿಡಿಯೋವನ್ನು ರೆಕಾರ್ಡ್ ಮಾಡಿದ ಅತ್ಯಂತ ಹೇಯ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ನಡದಿದೆ.

ತಾಯಿ ಹಾಗೂ ಮಗನ ನಡುವೆ ಆಸ್ತಿಗಾಗಿ ಜಗಳ ಶುರುವಾಗಿದೆ. ಈ ಕುರಿತು ಕುಟುಂಬಸ್ಥರು ಮಧ್ಯಪ್ರವೇಶಿದರೂ ಮಗ ಆಸ್ತಿಗೆ ಪಟ್ಟು ಹಿಡಿದಿದ್ದಾನೆ. ತಾಯಿ ಆಸ್ತಿ ಮಗನಿಗೆ ನೀಡಲು ನಿರಾಕರಿಸಿದ್ದಳು. ಹೀಗಾಗಿ ಜಗಳ ತಾರಕಕ್ಕೇರಿತ್ತು. ಕುಟುಂಬಸ್ಥರು ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ದೂರು ನೀಡಲಾಗಿತ್ತು.

ತಾಯಿ, ಮಗ ಹಾಗೂ ಕುಟುಂಬಸ್ಥರು ಖೈರ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಕುಟುಂಬಸ್ಥರು ಹಾಗೂ ತಾಯಿ ಮಗ ಪೊಲೀಸ್ ಠಾಣೆಯಲ್ಲಿ ಆಸ್ತಿ ಹಂಚಿಕೆ ವಿಚಾರದ ಮಾತುಕತೆ ಆರಂಭಿಸಿದ್ದಾರೆ. ಕೆಲ ಹೊತ್ತಿನ ಬಳಿಕ ತಾಯಿ ಹಾಗೂ ಮಗ ಪೊಲೀಸ್ ಠಾಣೆಯಿಂದ ಹೊರಬಂದಿದ್ದಾರೆ. ಬಳಿಕ ಠಾಣೆಯ ಬದಿಯಲ್ಲಿ ನಿಂತು ವಾಗ್ವಾದ ಆರಂಭಿಸಿದ್ದಾರೆ.

ಈ ವೇಳೆ ತಾಯಿ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚವುದಾಗಿ ಬೆದರಿಸಿದ್ದಾಳೆ. ಪೊಲೀಸರಿಗೆ ಹೇಳುವುದಾಗಿ ಮಗನ ಬೆದರಿಸಲು ನೋಡಿದ್ದಾರೆ. ಆದರೆ ಪಿತ್ತ ನೆತ್ತಿಗೇರಿದ್ದ ಮಗ ಬೆಂಕಿಯ ಕಿಡಿ ಹೊತ್ತಿಸಿದ್ದಾನೆ. ಪರಿಣಾಮ ಒಂದೇ ಸಮನೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಧಗಧನೆ ಹೊತ್ತಿ ಉರಿದಿದೆ. ಪೊಲೀಸರು ಓಡೋಡಿ ಬಂದು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಪ್ರಯತ್ನಗಳು ಕೆಲ ನಿಮಿಷಗಳ ವರೆಗೆ ನಡೆದಿದೆ.

ಠಾಣೆ ಒಳಗಿದ್ದ ಪೊಲೀಸರು ಟೇಬಲ್ ಮೇಲೆ, ಠಾಣೆಯಲ್ಲಿರುವ ಜೈಲಿನೊಳಗೆ ನೀಡವು ಬೆಡ್ ಶೀಟ್ ಹೊತ್ತು ತಂದು ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಬಹುತೇಕ ದೇಹದ ಭಾಗ ಸುಟ್ಟು ಹೋಗಿದೆ. ಇತ್ತ ಲೈಟರ್ ಮೂಲಕ ಬೆಂಕಿ ಹಚ್ಚಿದ ಮಗ ಬಳಿಕ ವಿಡಿಯೋ ರೆಕಾರ್ಡ್ ಮಾಡಿ ವಿಕೃತಿ ಮೆರೆದಿದ್ದಾನೆ. ತಕ್ಷಣವೇ ಮಹಿಳೆಯನ್ನು ಪೊಲೀಸರು ಆಸ್ಪತ್ರೆ ದಾಖಲಿಸಿದ್ದಾರೆ. ಶೇಕಡಾ 40 ರಷ್ಟು ಮಹಿಳೆ ದೇಹ ಸುಟ್ಟು ಹೋಗಿದೆ. ಥಮಿಕ ತನಿಕೆಯಲ್ಲಿ ಮಗ ಬೆಂಕಿ ಹಚ್ಚುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

23 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

24 hours ago