ಲಕ್ನೋ: ಪೊಲೀಸ್ ಪೇದೆಯೊಬ್ಬರು ಪೊಲೀಸ್ ಮೆಸ್ನಲ್ಲಿ ನೀಡಲಾದ ಆಹಾರ ಗುಣಮಟ್ಟದ್ದಲ್ಲ ಎಂದು ರಸ್ತೆಯ ಮೇಲೆ ನಿಂತು ಗಳಗಳನೇ ಅಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಉತ್ತರಪ್ರದೇಶದ ಕಾನ್ಸ್ಟೇಬಲ್ನನ್ನು ಮನೋಜ್ ಕುಮಾರ್ ಎಂದು ಗುರುತಿಸಲಾಗಿದೆ. ವೀಡಿಯೋದಲ್ಲಿ ಮನೋಜ್ ಕುಮಾರ್ ರೊಟ್ಟಿ, ದಾಲ್ ಹಾಗೂ ಅನ್ನವನ್ನು ತಟ್ಟೆಯನ್ನು ಹಿಡಿದು ಈ ಊಟವನ್ನು ಪ್ರಾಣಿಗಳು ಸಹ ತಿನ್ನುವುದಿಲ್ಲ ಎಂದು ರಸ್ತೆಯಲ್ಲಿ ಅಳುತ್ತಿದ್ದಾರೆ. ಅಲ್ಲಿದ್ದ ಹಿರಿಯ ಅಧಿಕಾರಿಯೊಬ್ಬರು ಮನೋಜ್ ಕುಮಾರ್ನನ್ನು ಮತ್ತೆ ಪೊಲೀಸ್ ಠಾಣೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಜೊತೆಗೆ ಅವರನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ.
ಆಹಾರದ ಬಗ್ಗೆ ತಮ್ಮ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಷ್ಟೇ ಅಲ್ಲದೇ ನನ್ನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದಾರಿಹೋಕರ ಬಳಿ ಮನೋಜ್ ಕುಮಾರ್ ಅಳಲು ತೋಡಿಕೊಂಡಿದ್ದಾರೆ.
ಪೊಲೀಸ್ ಅಧಿಕಾರಿಗಳಿಗೆ ಪೌಷ್ಟಿಕ ಆಹಾರ ನೀಡಲು ರಾಜ್ಯಸರ್ಕಾರ ಭತ್ಯೆ ನೀಡುತ್ತಿದೆ ಎಂದು ಯೋಗಿ ಆದಿತ್ಯನಾಥ್ ಈ ಹಿಂದೆ ಘೋಷಿಸಿದ್ದರು. ಆದರೂ ನಮಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ. ನಾವು ಸರಿಯಾದ ಆಹಾರವನ್ನು ಪಡೆಯದಿದ್ದರೆ, ಸರಿಯಾಗಿ ಕೆಲಸ ನಿರ್ವಹಿಸಲು ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…