ದಕ್ಷಿಣ ಕನ್ನಡ

ಪೊಳಲಿ ದೇವಾಲಯದಲ್ಲಿ ಕಣ್ಣೀರಿಟ್ಟ ರಮಾನಾಥ ರೈ

ಮಂಗಳೂರು: ತಾಲೂಕಿನ ಪೊಳಲಿ ದೇವಸ್ಥಾನ ಕೊಡಿ ಮರ ಕಡಿದ ವಿಚಾರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಕಣ್ಣೀರಿಟ್ಟಿದ್ದಾರೆ.

ದೇವಸ್ಥಾನದ ಧ್ವಜ ಸ್ಥಂಭ ನಿರ್ಮಾಣಕ್ಕಾಗಿ ಮರವೊಂದನ್ನು ಕೊಡಗಿನ ಸಂಪಾಜೆ ಅರಣ್ಯ ಪ್ರದೇಶದಿಂದ ಕಡಿದು ತರಲಾಗಿತ್ತು. ಅಷ್ಟಕ್ಕೂ ಈ ಮರವನ್ನು ಬಂಟ್ವಾಳದ ಬಿಲ್ಲವ ಜನಾಂಗದವರು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದರು. ಆ ಮರವನ್ನು ಕಡಿದಿದ್ದಕ್ಕೆ ಅರಣ್ಯ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ 21 ಲಕ್ಷ ರೂಪಾಯಿ ಮರದ ಮೊತ್ತವಾಗಿ ಪಾವತಿಸುವಂತೆ ಹೇಳಿತ್ತು. ಸರಕಾರ ಕೊನೆಗೆ ದೇವಸ್ಥಾನಕ್ಕೆ ರಿಯಾಯಿತಿ ನೀಡಿ 10 ಲಕ್ಷ 70 ಸಾವಿರ ರೂ ಪಾವತಿಸುವಂತೆ ಹೇಳಿತು.

ರಮಾನಾಥ ರೈ ಈ ಪೊಳಲಿ ರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿದ್ದರು. ಅರಣ್ಯ ಇಲಾಖೆಯೇ ಅವರ ಕೈಯ್ಯಲ್ಲಿತ್ತು. ಅರಣ್ಯ ಸಚಿವರಾಗಿದ್ದರೂ ದೇವಸ್ಥಾನ ಅರಣ್ಯ ಇಲಾಖೆಗೆ ಹಣ ಕಟ್ಟಬೇಕಾಯಿತು ಅಂತಾ ಆರೋಪಗಳು ಕೇಳಿಬಂದಿತ್ತು. ಈ ಆರೋಪದಿಂದ ನೊಂದ ರೈ ಪೊಳಲಿ ರಾಜೇಶ್ವರಿ ದೇವಸ್ಥಾನದಲ್ಲಿ ಕಣ್ಣೀರಿಟ್ಟಿದ್ದಾರೆ.

ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರಮಾನಾಥ ರೈ ಈ ವಿಚಾರದಲ್ಲಿ ನನ್ನ ಪಾತ್ರವೇನೂ ಇಲ್ಲ. ಈ ವಿಚಾರದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕೈವಾಡವಿದೆ. ಸುಮ್ಮನೇ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಕಣ್ಣೀರಿಟ್ಟಿದ್ದಾರೆ.

ರಮಾನಾಥ ರೈ ಈ ಹಿಂದೆ ಕೇರಳದ ಕಾನತ್ತೂರು ದೇವಸ್ಥಾನಕ್ಕೂ ಕೂಡಾ ಭೇಟಿ ನೀಡಿದ್ದರು. ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಹಾಗೂ ಶರತ್ ಮಡಿವಾಳ ಹತ್ಯೆ ಪ್ರಕರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ. ತಾವು ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಇಲ್ಲವಾದರೆ ತಮ್ಮ ಹೆಸರನ್ನು ಅಪಪ್ರಚಾರ ಮಾಡುತ್ತಿರುವವರನ್ನು ಕರೆಸಿ ವಿಚಾರಿಸಲಿ ಎಂದು ದೈವಸ್ಥಾನದಲ್ಲಿ ರೈ ವಿನಂತಿ ಮಾಡಿಕೊಂಡಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago