ಮಂಗಳೂರು: ತಾಲೂಕಿನ ಪೊಳಲಿ ದೇವಸ್ಥಾನ ಕೊಡಿ ಮರ ಕಡಿದ ವಿಚಾರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಕಣ್ಣೀರಿಟ್ಟಿದ್ದಾರೆ.
ದೇವಸ್ಥಾನದ ಧ್ವಜ ಸ್ಥಂಭ ನಿರ್ಮಾಣಕ್ಕಾಗಿ ಮರವೊಂದನ್ನು ಕೊಡಗಿನ ಸಂಪಾಜೆ ಅರಣ್ಯ ಪ್ರದೇಶದಿಂದ ಕಡಿದು ತರಲಾಗಿತ್ತು. ಅಷ್ಟಕ್ಕೂ ಈ ಮರವನ್ನು ಬಂಟ್ವಾಳದ ಬಿಲ್ಲವ ಜನಾಂಗದವರು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದರು. ಆ ಮರವನ್ನು ಕಡಿದಿದ್ದಕ್ಕೆ ಅರಣ್ಯ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ 21 ಲಕ್ಷ ರೂಪಾಯಿ ಮರದ ಮೊತ್ತವಾಗಿ ಪಾವತಿಸುವಂತೆ ಹೇಳಿತ್ತು. ಸರಕಾರ ಕೊನೆಗೆ ದೇವಸ್ಥಾನಕ್ಕೆ ರಿಯಾಯಿತಿ ನೀಡಿ 10 ಲಕ್ಷ 70 ಸಾವಿರ ರೂ ಪಾವತಿಸುವಂತೆ ಹೇಳಿತು.
ರಮಾನಾಥ ರೈ ಈ ಪೊಳಲಿ ರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿದ್ದರು. ಅರಣ್ಯ ಇಲಾಖೆಯೇ ಅವರ ಕೈಯ್ಯಲ್ಲಿತ್ತು. ಅರಣ್ಯ ಸಚಿವರಾಗಿದ್ದರೂ ದೇವಸ್ಥಾನ ಅರಣ್ಯ ಇಲಾಖೆಗೆ ಹಣ ಕಟ್ಟಬೇಕಾಯಿತು ಅಂತಾ ಆರೋಪಗಳು ಕೇಳಿಬಂದಿತ್ತು. ಈ ಆರೋಪದಿಂದ ನೊಂದ ರೈ ಪೊಳಲಿ ರಾಜೇಶ್ವರಿ ದೇವಸ್ಥಾನದಲ್ಲಿ ಕಣ್ಣೀರಿಟ್ಟಿದ್ದಾರೆ.
ರಮಾನಾಥ ರೈ ಈ ಹಿಂದೆ ಕೇರಳದ ಕಾನತ್ತೂರು ದೇವಸ್ಥಾನಕ್ಕೂ ಕೂಡಾ ಭೇಟಿ ನೀಡಿದ್ದರು. ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಹಾಗೂ ಶರತ್ ಮಡಿವಾಳ ಹತ್ಯೆ ಪ್ರಕರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ. ತಾವು ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಇಲ್ಲವಾದರೆ ತಮ್ಮ ಹೆಸರನ್ನು ಅಪಪ್ರಚಾರ ಮಾಡುತ್ತಿರುವವರನ್ನು ಕರೆಸಿ ವಿಚಾರಿಸಲಿ ಎಂದು ದೈವಸ್ಥಾನದಲ್ಲಿ ರೈ ವಿನಂತಿ ಮಾಡಿಕೊಂಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…