ದಕ್ಷಿಣ ಕನ್ನಡ

ಪೊಳಲಿ ದೇವಾಲಯದಲ್ಲಿ ಕಣ್ಣೀರಿಟ್ಟ ರಮಾನಾಥ ರೈ

ಮಂಗಳೂರು: ತಾಲೂಕಿನ ಪೊಳಲಿ ದೇವಸ್ಥಾನ ಕೊಡಿ ಮರ ಕಡಿದ ವಿಚಾರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಕಣ್ಣೀರಿಟ್ಟಿದ್ದಾರೆ.

ದೇವಸ್ಥಾನದ ಧ್ವಜ ಸ್ಥಂಭ ನಿರ್ಮಾಣಕ್ಕಾಗಿ ಮರವೊಂದನ್ನು ಕೊಡಗಿನ ಸಂಪಾಜೆ ಅರಣ್ಯ ಪ್ರದೇಶದಿಂದ ಕಡಿದು ತರಲಾಗಿತ್ತು. ಅಷ್ಟಕ್ಕೂ ಈ ಮರವನ್ನು ಬಂಟ್ವಾಳದ ಬಿಲ್ಲವ ಜನಾಂಗದವರು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದರು. ಆ ಮರವನ್ನು ಕಡಿದಿದ್ದಕ್ಕೆ ಅರಣ್ಯ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ 21 ಲಕ್ಷ ರೂಪಾಯಿ ಮರದ ಮೊತ್ತವಾಗಿ ಪಾವತಿಸುವಂತೆ ಹೇಳಿತ್ತು. ಸರಕಾರ ಕೊನೆಗೆ ದೇವಸ್ಥಾನಕ್ಕೆ ರಿಯಾಯಿತಿ ನೀಡಿ 10 ಲಕ್ಷ 70 ಸಾವಿರ ರೂ ಪಾವತಿಸುವಂತೆ ಹೇಳಿತು.

ರಮಾನಾಥ ರೈ ಈ ಪೊಳಲಿ ರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿದ್ದರು. ಅರಣ್ಯ ಇಲಾಖೆಯೇ ಅವರ ಕೈಯ್ಯಲ್ಲಿತ್ತು. ಅರಣ್ಯ ಸಚಿವರಾಗಿದ್ದರೂ ದೇವಸ್ಥಾನ ಅರಣ್ಯ ಇಲಾಖೆಗೆ ಹಣ ಕಟ್ಟಬೇಕಾಯಿತು ಅಂತಾ ಆರೋಪಗಳು ಕೇಳಿಬಂದಿತ್ತು. ಈ ಆರೋಪದಿಂದ ನೊಂದ ರೈ ಪೊಳಲಿ ರಾಜೇಶ್ವರಿ ದೇವಸ್ಥಾನದಲ್ಲಿ ಕಣ್ಣೀರಿಟ್ಟಿದ್ದಾರೆ.

ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರಮಾನಾಥ ರೈ ಈ ವಿಚಾರದಲ್ಲಿ ನನ್ನ ಪಾತ್ರವೇನೂ ಇಲ್ಲ. ಈ ವಿಚಾರದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕೈವಾಡವಿದೆ. ಸುಮ್ಮನೇ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಕಣ್ಣೀರಿಟ್ಟಿದ್ದಾರೆ.

ರಮಾನಾಥ ರೈ ಈ ಹಿಂದೆ ಕೇರಳದ ಕಾನತ್ತೂರು ದೇವಸ್ಥಾನಕ್ಕೂ ಕೂಡಾ ಭೇಟಿ ನೀಡಿದ್ದರು. ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಹಾಗೂ ಶರತ್ ಮಡಿವಾಳ ಹತ್ಯೆ ಪ್ರಕರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ. ತಾವು ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಇಲ್ಲವಾದರೆ ತಮ್ಮ ಹೆಸರನ್ನು ಅಪಪ್ರಚಾರ ಮಾಡುತ್ತಿರುವವರನ್ನು ಕರೆಸಿ ವಿಚಾರಿಸಲಿ ಎಂದು ದೈವಸ್ಥಾನದಲ್ಲಿ ರೈ ವಿನಂತಿ ಮಾಡಿಕೊಂಡಿದ್ದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago