ಮಂಗಳೂರು: ತಾಲೂಕಿನ ಪೊಳಲಿ ದೇವಸ್ಥಾನ ಕೊಡಿ ಮರ ಕಡಿದ ವಿಚಾರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಕಣ್ಣೀರಿಟ್ಟಿದ್ದಾರೆ.
ದೇವಸ್ಥಾನದ ಧ್ವಜ ಸ್ಥಂಭ ನಿರ್ಮಾಣಕ್ಕಾಗಿ ಮರವೊಂದನ್ನು ಕೊಡಗಿನ ಸಂಪಾಜೆ ಅರಣ್ಯ ಪ್ರದೇಶದಿಂದ ಕಡಿದು ತರಲಾಗಿತ್ತು. ಅಷ್ಟಕ್ಕೂ ಈ ಮರವನ್ನು ಬಂಟ್ವಾಳದ ಬಿಲ್ಲವ ಜನಾಂಗದವರು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದರು. ಆ ಮರವನ್ನು ಕಡಿದಿದ್ದಕ್ಕೆ ಅರಣ್ಯ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ 21 ಲಕ್ಷ ರೂಪಾಯಿ ಮರದ ಮೊತ್ತವಾಗಿ ಪಾವತಿಸುವಂತೆ ಹೇಳಿತ್ತು. ಸರಕಾರ ಕೊನೆಗೆ ದೇವಸ್ಥಾನಕ್ಕೆ ರಿಯಾಯಿತಿ ನೀಡಿ 10 ಲಕ್ಷ 70 ಸಾವಿರ ರೂ ಪಾವತಿಸುವಂತೆ ಹೇಳಿತು.
ರಮಾನಾಥ ರೈ ಈ ಪೊಳಲಿ ರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿದ್ದರು. ಅರಣ್ಯ ಇಲಾಖೆಯೇ ಅವರ ಕೈಯ್ಯಲ್ಲಿತ್ತು. ಅರಣ್ಯ ಸಚಿವರಾಗಿದ್ದರೂ ದೇವಸ್ಥಾನ ಅರಣ್ಯ ಇಲಾಖೆಗೆ ಹಣ ಕಟ್ಟಬೇಕಾಯಿತು ಅಂತಾ ಆರೋಪಗಳು ಕೇಳಿಬಂದಿತ್ತು. ಈ ಆರೋಪದಿಂದ ನೊಂದ ರೈ ಪೊಳಲಿ ರಾಜೇಶ್ವರಿ ದೇವಸ್ಥಾನದಲ್ಲಿ ಕಣ್ಣೀರಿಟ್ಟಿದ್ದಾರೆ.
ರಮಾನಾಥ ರೈ ಈ ಹಿಂದೆ ಕೇರಳದ ಕಾನತ್ತೂರು ದೇವಸ್ಥಾನಕ್ಕೂ ಕೂಡಾ ಭೇಟಿ ನೀಡಿದ್ದರು. ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಹಾಗೂ ಶರತ್ ಮಡಿವಾಳ ಹತ್ಯೆ ಪ್ರಕರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ. ತಾವು ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಇಲ್ಲವಾದರೆ ತಮ್ಮ ಹೆಸರನ್ನು ಅಪಪ್ರಚಾರ ಮಾಡುತ್ತಿರುವವರನ್ನು ಕರೆಸಿ ವಿಚಾರಿಸಲಿ ಎಂದು ದೈವಸ್ಥಾನದಲ್ಲಿ ರೈ ವಿನಂತಿ ಮಾಡಿಕೊಂಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…